ನವದೆಹಲಿ: ದೇಶದಲ್ಲಿ ಕೆಲವೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎಂಎಸ್ಎಂಇ, ಆಹಾರ ಸಂಸ್ಕರಣಾ ಘಟಕಗಳಂತಹ ಕೈಗಾರಿಕೆಗಳಿಗೆ ಮತ್ತು ಮೂಲಸೌಕರ್ಯ ನಿರ್ಮಾಣ ಯೋಜನೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಆಮ್ಲಜನಕ ಉತ್ಪಾದಕ ಘಟಕಗಳಿಗೆ ಅನುಮತಿ ನೀಡಿದೆ.