ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೋದಿ ಸರ್ಕಾರದ ನೀತಿಗಳಿಂದಾಗಿ ಜಿಡಿಪಿಯು ಕುಸಿದಿದೆ. ಕೇಂದ್ರ ಸರ್ಕಾರವು ಭಾರತದ ಯುವ ಜನರ ಭವಿಷ್ಯವನ್ನು ಹತ್ತಿಕ್ಕಿದೆ. ಅವರ ಧ್ವನಿಯನ್ನು ಸರ್ಕಾರಕ್ಕೆ ಕೇಳುವಂತೆ ಮಾಡೋಣ. ಇದಕ್ಕಾಗಿಗುರುವಾರ ಬೆಳಿಗ್ಗೆ 10 ರಿಂದ 10 ಗಂಟೆಗಳ ಕಾಲ ನಡೆಯಲಿರುವ ಕಾಂಗ್ರೆಸ್ ಪಕ್ಷದ ‘ ಸ್ಪೀಕ್ ಅಪ್ ಫಾರ್ ಜಾಬ್ಸ್’ ಎಂಬ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದ್ದಾರೆ.