ನವದೆಹಲಿ: ‘ಸಂಸತ್ನ ಮುಂಗಾರು ಅಧಿವೇಶನ ಸಂದರ್ಭದಲ್ಲಿ ವಿವಿಧ ವಿಷಯಗಳ ಕುರಿತು ಆರೋಗ್ಯಕರ ಹಾಗೂ ಅರ್ಥಪೂರ್ಣ ಚರ್ಚೆಗೆ ಸರ್ಕಾರ ಸಿದ್ಧವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.
ಸೋಮವಾರ (ಜುಲೈ 19) ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿದರು.
‘33 ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲ ಜನಪ್ರತಿನಿಧಿಗಳು ನೀಡುವ, ವಿಶೇಷವಾಗಿ ವಿರೋಧ ಪಕ್ಷಗಳ ಸಂಸದರಿಂದ ಬರುವ ಸಲಹೆಗಳಿಗೆ ಹೆಚ್ಚಿನ ಮೌಲ್ಯ ಇರುತ್ತದೆ. ಅವರು ನೀಡುವ ಸಲಹೆ–ಸೂಚನೆಗಳು, ಪ್ರಸ್ತಾಪಿಸುವ ವಿಷಯಗಳಿಂದ ಚರ್ಚೆ ಹೆಚ್ಚು ಮೆರುಗು ಬರುತ್ತದೆ ಎಂಬುದಾಗಿ ಪ್ರಧಾನಿ ಹೇಳಿದರು’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ರಕ್ಷಣಾ ಮಂತ್ರಿ ರಾಜನಾಥ್ಸಿಂಗ್, ರಾಜ್ಯಸಭೆಯ ಸದನನಾಯಕ ಪೀಯೂಷ್ ಗೋಯಲ್, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ರಂಜನ್ ಚೌಧರಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಿಎಂಸಿ ಸಭಾನಾಯಕ ಡೆರೆಕ್ ಓಬ್ರಿಯಾನ್, ಡಿಎಂಕೆ ನಾಯಕ ತಿರುಚಿ ಶಿವ, ಸಮಾಜವಾದಿ ಪಾರ್ಟಿಯ ರಾಮಗೋಪಾಲ್ ಯಾದವ್, ಬಿಎಸ್ಪಿಯ ಸತೀಶ್ ಮಿಶ್ರಾ, ಎನ್ಡಿಎ ಅಂಗಪಕ್ಷವಾದ ಅಪ್ನಾ ದಳದ ನಾಯಕಿ ಅನುಪ್ರಿಯಾ ಪಟೇಲ್, ಎಲ್ಜಿಪಿ ಮುಖಂಡ ಪಶುಪತಿ ಪರಸ್ ಸಹ ಉಪಸ್ಥಿತರಿದ್ದರು.
ಮುಂಗಾರು ಅಧಿವೇಶನ ಆಗಸ್ಟ್ 13ರಂದು ಮುಕ್ತಾಯಗೊಳ್ಳುವುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.