ಈ ವಿಚಾರವಾಗಿ ಸುದ್ದಿಸಂಸ್ಥೆ ಎಎನ್ಐ ಜೊತೆ ಶನಿವಾರ ಮಾತನಾಡಿರುವ ಅವರು, 'ಪ್ರತಿಭಟನಾನಿರತ ರೈತರ ಜೊತೆ ಮಾತುಕತೆ ನಡೆಸಲು ಭಾರತ ಸರ್ಕಾರ ಸಿದ್ಧವಿದೆ. ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಕೃಷಿ ಸಚಿವರು ಡಿಸೆಂಬರ್ 3ರಂದು ರೈತರನ್ನು ಆಹ್ವಾನಿಸಿದ್ದಾರೆ. ರೈತರ ಪ್ರತಿಯೊಂದು ಸಮಸ್ಯೆ ಮತ್ತು ಬೇಡಿಕೆಯನ್ನು ಸರ್ಕಾರ ಆಲಿಸಲಿದೆ' ಎಂದು ತಿಳಿಸಿದ್ದಾರೆ.