ಕೋವಿಡ್ ವಾರಿಯರ್ ಮಕ್ಕಳಿಗೆ 5 ಎಂಬಿಬಿಎಸ್ ಸೀಟು ಮೀಸಲು –ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ಸೋಂಕಿತರ ಆರೈಕೆಯಲ್ಲಿದ್ದು, ಸಾವನ್ನಪ್ಪಿದ ಕೋವಿಡ್ ವಾರಿಯರ್ಗಳ ಮಕ್ಕಳಿಗೆ 2020–2021ನೇ ಸಾಲಿನ ಎಂಬಿಬಿಎಸ್ ಪದವಿ ಶಿಕ್ಷಣ ಪ್ರವೇಶದಲ್ಲಿ ಕೇಂದ್ರ ಸರ್ಕಾರ ‘ಸೆಂಟ್ರಲ್ ಪೂಲ್‘ ವಿಭಾಗದಡಿ ಐದು ಸೀಟ್ಗಳನ್ನು ಮೀಸಲಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ
ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವಾಲಯ, ವಿದ್ಯಾರ್ಥಿಗಳ ಆಯ್ಕೆ ಮತ್ತು ನಾಮನಿರ್ದೇಶನಕ್ಕಾಗಿ ರಚಿಸಿರುವ ಮಾರ್ಗಸೂಚಿ ಗಳ ಅನ್ವಯ ‘ಕೋವಿಡ್ ವಾರಿಯರ್ ವಾರ್ಡ್‘ ಎಂಬ ಪ್ರತ್ಯೇಕ ವಿಭಾಗವನ್ನೇ ಆರಂಭಿಸಿದೆ.
ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಕರ್ತವ್ಯದ ಕಾರಣದಿಂದಾಗಿ ಸೋಂಕು ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ ಕೋವಿಡ್ ವಾರಿಯರ್ಗಳ ಉದಾತ್ತ ಸೇವೆಯನ್ನು ಗೌರವಿಸುವ ಹಾಗೂ ಅವರ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ನಡೆಸುವ ಎನ್ಇಇಟಿ–2020ರಲ್ಲಿ ಪಡೆದ ರ್ಯಾಂಕ್ ಆಧಾರದ ಮೇಲೆ, ಆನ್ಲೈನ್ ಕೌನ್ಸಿಲಿಂಗ್ ಮೂಲಕ ವೈದ್ಯಕೀಯ ಮಂಡಳಿ ಸಮಿತಿ (ಎಂಸಿಸಿ), ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ.
ಕೋವಿಡ್ ವಾರಿಯರ್ಗಳಿಗೆ ₹50 ಲಕ್ಷ ವಿಮಾ ಪ್ಯಾಕೇಜ್ ಘೋಷಿಸುವಾಗ ಸರ್ಕಾರ ‘ಕೋವಿಡ್ ಯೋಧ‘ರು ಯಾರು ಎಂದು ವ್ಯಾಖ್ಯಾನಿಸಿದೆ. ಅವರೆಲ್ಲರೂ ಈ ಸೌಲಭ್ಯಕ್ಕೆ ಒಳಪಡುತ್ತಾರೆ. ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವವರು ಹಾಗೂ ಕೋವಿಡ್ 19 ರೋಗಿಗಳ ನೇರ ಸಂಪರ್ಕ ಮತ್ತು ಆರೈಕೆಯಲ್ಲಿ ತೊಡಗಿರುವವರೆಲ್ಲರೂ ಈ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಇದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯಿಸುತ್ತದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.