ಈ ಹಿಂದೆ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿದ್ದ ಎನ್.ವಿ.ರಮಣ ನೇತೃತ್ವದ ಕೊಲಿಜಿಯಂ, ಕೃಪಾಲ್ ಅವರಿಗೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಕಳೆದ ವರ್ಷ ಶಿಫಾರಸು ಮಾಡಿತ್ತು. ಇದಕ್ಕೂ ಮುನ್ನ, ಕೃಪಾಲ್ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು.