‘ಕೆಲ ಇನ್ಸ್ಟಿಟ್ಯೂಟ್ ಹಾಗೂ ಏಜೆನ್ಸಿಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆಯೇ ಜೋಶಿಮಠದಲ್ಲಿನ ಪರಿಸ್ಥಿತಿ ಕುರಿತ ವರದಿ ಹಾಗೂ ಮಾಹಿತಿ ಪ್ರಕಟಿಸುತ್ತಿವೆ. ಇದರಿಂದ ವಸ್ತುಸ್ಥಿತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಜೊತೆಗೆ ಸಮುದಾಯದಲ್ಲಿ ಭೀತಿಯ ವಾತಾವರಣವೂ ಸೃಷ್ಟಿಯಾಗಲಿದೆ. ಹೀಗಾಗಿ ಇನ್ನು ಮುಂದೆ ಮಾಹಿತಿ ಅಥವಾ ವರದಿ ಪ್ರಕಟಿಸುವ ಮುನ್ನ ಸಂಬಂಧಪಟ್ಟ ಇಲಾಖೆ, ಸಚಿವಾಲಯ ಅಥವಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಉತ್ತರಾಖಂಡ ಸರ್ಕಾರ ಹೇಳಿದೆ.