ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಮೇಲೆ ಅವಲಂಬಿತರಾದವರಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ₹3274.87 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಣವನ್ನು 2025-26ರವರೆಗೆ ಸದ್ಬಳಕೆ ಮಾಡಬಹುದಾಗಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆಯಡಿ(ಎಸ್ಎಸ್ಎಸ್ವೈ) ಹಣಕಾಸು ನೆರವು ಪಡೆಯುವ ದೇಶದ 23,566 ಫಲಾನುಭವಿಗಳಿಗೆ ಅನುಕೂಲವಾಗಲಿದೆ.