ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದ ಬಳಿಯೇ ಇರುವ ಈ ಸರ್ಕಾರಿ ಬಂಗಲೆಯನ್ನು ಕೇಂದ್ರ ಸಚಿವರಿಗೆ ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರ ಕ್ಯಾಬಿನೆಟ್ನಲ್ಲಿ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಈ ಬಂಗಲೆ ನೀಡಲಾಗಿತ್ತು. ಅವರ ನಿಧನದ ಬಳಿಕ ಈ ನಿವಾಸ ಖಾಲಿ ಮಾಡುವಂತೆ ಚಿರಾಗ್ ಅವರಿಗೆ ಕಳೆದ ವರ್ಷ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ.