<p><strong>ನವದೆಹಲಿ: </strong>‘ಗೂಢಚರ್ಯೆ ಸಾಫ್ಟ್ವೇರ್ ಬಳಸಿರುವುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಳ್ಳುತ್ತಿದೆ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ ಬುಧವಾರ ಹೇಳಿದ್ದಾರೆ.</p>.<p>‘ಸರ್ಕಾರಕ್ಕೆ ಗೊತ್ತಿರುವ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಾಲಿಸಿಟರಲ್ ಜನರಲ್ ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಹೀಗಾಗಿ, ಈ ಮೂಲಕವೇ ಗೂಢಚರ್ಯೆ ಸಾಫ್ಟ್ವೇರ್ ಬಳಸಿರುವುದನ್ನು ಒಪ್ಪಿಕೊಂಡಂತಾಗಿದೆ. ಬಳಕೆಯಾಗಿರುವುದು ಪೆಗಾಸಸ್ ಸಾಫ್ಟ್ವೇರ್ ಅಥವಾ ಬೇರೆಯದೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಯಾವ ಉದ್ದೇಶಕ್ಕೆ ಎನ್ನುವುದನ್ನು ತಿಳಿಸಬೇಕು’ ಎಂದು ಹೇಳಿದ್ದಾರೆ.</p>.<p>’ಈ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಿದರೆ ಉಳಿದ ಪ್ರಶ್ನೆಗಳಿಗೆ ಸಹಜವಾಗಿಯೇ ಉತ್ತರಗಳು ದೊರೆಯಲಿವೆ’ ಎಂದು ಚಿದಂಬರಂ ಹೇಳಿದ್ದಾರೆ.</p>.<p>ಪೆಗಾಸಸ್ನಂತಹ ಗೂಢಚರ್ಯೆ ಸಾಫ್ಟ್ವೇರ್ ಅನ್ನು ದೇಶವು ಬಳಸುತ್ತದೆಯೇ ಅಥವಾ ಇಲ್ಲವೋ ಎನ್ನುವುದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಗೂಢಚರ್ಯೆ ಸಾಫ್ಟ್ವೇರ್ ಬಳಸಿರುವುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಳ್ಳುತ್ತಿದೆ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ ಬುಧವಾರ ಹೇಳಿದ್ದಾರೆ.</p>.<p>‘ಸರ್ಕಾರಕ್ಕೆ ಗೊತ್ತಿರುವ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಾಲಿಸಿಟರಲ್ ಜನರಲ್ ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಹೀಗಾಗಿ, ಈ ಮೂಲಕವೇ ಗೂಢಚರ್ಯೆ ಸಾಫ್ಟ್ವೇರ್ ಬಳಸಿರುವುದನ್ನು ಒಪ್ಪಿಕೊಂಡಂತಾಗಿದೆ. ಬಳಕೆಯಾಗಿರುವುದು ಪೆಗಾಸಸ್ ಸಾಫ್ಟ್ವೇರ್ ಅಥವಾ ಬೇರೆಯದೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಯಾವ ಉದ್ದೇಶಕ್ಕೆ ಎನ್ನುವುದನ್ನು ತಿಳಿಸಬೇಕು’ ಎಂದು ಹೇಳಿದ್ದಾರೆ.</p>.<p>’ಈ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಿದರೆ ಉಳಿದ ಪ್ರಶ್ನೆಗಳಿಗೆ ಸಹಜವಾಗಿಯೇ ಉತ್ತರಗಳು ದೊರೆಯಲಿವೆ’ ಎಂದು ಚಿದಂಬರಂ ಹೇಳಿದ್ದಾರೆ.</p>.<p>ಪೆಗಾಸಸ್ನಂತಹ ಗೂಢಚರ್ಯೆ ಸಾಫ್ಟ್ವೇರ್ ಅನ್ನು ದೇಶವು ಬಳಸುತ್ತದೆಯೇ ಅಥವಾ ಇಲ್ಲವೋ ಎನ್ನುವುದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>