ಎಐಎಂಐಎಂ ಸದಸ್ಯ ಇಮ್ತಿಯಾಜ್ ಜಲೀಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೈಲಾಶ್ ಅವರು, ‘ಪ್ರತಿ ಚೀಲಕ್ಕೆ ₹ 600ರಷ್ಟು ಸಬ್ಸಿಡಿ ಇದೆ. ಇಂದು ಪ್ರತಿ ಚೀಲ ರಸಗೊಬ್ಬರದ ಮೇಲೆ ₹ 4,200ಕ್ಕೆ ತಲುಪಿದೆ. ಆದರೂ, ಕೇಂದ್ರ ಸರ್ಕಾರ ₹ 2,600ರಷ್ಟು ಸಬ್ಸಿಡಿ ನೀಡುವ ಮೂಲಕ ಪ್ರತಿ ಚೀಲಕ್ಕೆ ₹ 1,200 ದರದಲ್ಲಿ ರೈತರಿಗೆ ಪೂರೈಸುತ್ತಿದೆ. ಅಗತ್ಯವಿದ್ದಾಗ, ಎಲ್ಲಿಂದ ತರಬೇಕಾದರೂ ರೈತರಿಗೆ ರಸಗೊಬ್ಬರ ಲಭ್ಯವಾಗುವಂತೆ ಮಾಡಲಾಗುವುದು’ ಎಂದು ವಿವರಿಸಿದರು.