<p><strong>ನವದೆಹಲಿ: </strong>ಚಾಲಕರ ತಪ್ಪಿನಿಂದಾಗಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದಿಂದ, ಚಾಲಕರ ಅರೆನಿದ್ರಾವಸ್ಥೆ ಹಾಗೂ ಜಾಗರೂಕ ಸ್ಥಿತಿಯನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಂಬಂಧ ವ್ಯವಸ್ಥೆಯನ್ನು ರೂಪಿಸಲು ಕೇಂದ್ರ ಭೂಸಾರಿಗೆ ಸಚಿವಾಲಯ ಮುಂದಾಗಿದೆ. ಈ ಸಂಬಂಧ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<p>ಈ ನಿಟ್ಟಿನಲ್ಲಿ ‘ಆಟೊಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಕಮಿಟಿ’ಯನ್ನು (ಎಐಎಸ್ಸಿ) ರಚಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಪ್ರವಾಸೋದ್ಯಮದ ಮೇಲಿನ ಸಂಸದೀಯ ಸಮಿತಿಗೆ ಸಚಿವಾಲಯ ತಿಳಿಸಿದೆ.</p>.<p><a href="https://www.prajavani.net/india-news/sc-to-hear-pleas-of-muslim-body-others-against-demolitions-on-sep-7-962153.html" itemprop="url">ಗಲಭೆಕೋರರ ಆಸ್ತಿ ನೆಲಸಮ ವಿರುದ್ಧದ ಅರ್ಜಿ: ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ </a></p>.<p>ರಸ್ತೆ ಅಪಘಾತಗಳನ್ನು ತಡೆಗಟ್ಟಲುಚಾಲನಾ ಅವಧಿಯನ್ನು ನಿಯಂತ್ರಿಸುವುದು ಅಗತ್ಯ. ಇದಕ್ಕಾಗಿ ಪ್ರತಿದಿನ ಎಷ್ಟು ಗಂಟೆಗಳ ಕಾಲ ವಾಹನಗಳ ಚಾಲನೆ ಮಾಡಲಾಗುತ್ತದೆ ಎಂಬುದರ ಮೇಲೆ ನಿಗಾ ಇಡಬೇಕು ಹಾಗೂ ದಿನವೊಂದಕ್ಕೆ ಎಷ್ಟು ಗಂಟೆಗಳಷ್ಟು ಚಾಲನೆ ಮಾಡಬೇಕು ಎಂಬುದನ್ನು ನಿಗದಿ ಮಾಡಬೇಕು ಎಂಬ ಅಂಶಗಳನ್ನು ಒಳಗೊಂಡ ವರದಿಯನ್ನು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಸಮಿತಿ ಮಂಡಿಸಿದೆ.</p>.<p>‘ದೇಶದಲ್ಲಿ ಉತ್ತಮ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದ್ದರೂ, ಪದೇಪದೇ ಸಂಭವಿಸುತ್ತಿರುವ ಭೀಕರ ಅಪಘಾತಗಳಿಂದಾಗಿ ರಸ್ತೆಗಳಿಗೆ ಕೆಟ್ಟ ಹೆಸರು ಬರುವಂತಾಗಿದೆ’ ಎಂದೂ ಸಮಿತಿ ತನ್ನ ವರದಿಯಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಚಾಲಕರ ತಪ್ಪಿನಿಂದಾಗಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದಿಂದ, ಚಾಲಕರ ಅರೆನಿದ್ರಾವಸ್ಥೆ ಹಾಗೂ ಜಾಗರೂಕ ಸ್ಥಿತಿಯನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಂಬಂಧ ವ್ಯವಸ್ಥೆಯನ್ನು ರೂಪಿಸಲು ಕೇಂದ್ರ ಭೂಸಾರಿಗೆ ಸಚಿವಾಲಯ ಮುಂದಾಗಿದೆ. ಈ ಸಂಬಂಧ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<p>ಈ ನಿಟ್ಟಿನಲ್ಲಿ ‘ಆಟೊಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಕಮಿಟಿ’ಯನ್ನು (ಎಐಎಸ್ಸಿ) ರಚಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಪ್ರವಾಸೋದ್ಯಮದ ಮೇಲಿನ ಸಂಸದೀಯ ಸಮಿತಿಗೆ ಸಚಿವಾಲಯ ತಿಳಿಸಿದೆ.</p>.<p><a href="https://www.prajavani.net/india-news/sc-to-hear-pleas-of-muslim-body-others-against-demolitions-on-sep-7-962153.html" itemprop="url">ಗಲಭೆಕೋರರ ಆಸ್ತಿ ನೆಲಸಮ ವಿರುದ್ಧದ ಅರ್ಜಿ: ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ </a></p>.<p>ರಸ್ತೆ ಅಪಘಾತಗಳನ್ನು ತಡೆಗಟ್ಟಲುಚಾಲನಾ ಅವಧಿಯನ್ನು ನಿಯಂತ್ರಿಸುವುದು ಅಗತ್ಯ. ಇದಕ್ಕಾಗಿ ಪ್ರತಿದಿನ ಎಷ್ಟು ಗಂಟೆಗಳ ಕಾಲ ವಾಹನಗಳ ಚಾಲನೆ ಮಾಡಲಾಗುತ್ತದೆ ಎಂಬುದರ ಮೇಲೆ ನಿಗಾ ಇಡಬೇಕು ಹಾಗೂ ದಿನವೊಂದಕ್ಕೆ ಎಷ್ಟು ಗಂಟೆಗಳಷ್ಟು ಚಾಲನೆ ಮಾಡಬೇಕು ಎಂಬುದನ್ನು ನಿಗದಿ ಮಾಡಬೇಕು ಎಂಬ ಅಂಶಗಳನ್ನು ಒಳಗೊಂಡ ವರದಿಯನ್ನು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಸಮಿತಿ ಮಂಡಿಸಿದೆ.</p>.<p>‘ದೇಶದಲ್ಲಿ ಉತ್ತಮ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದ್ದರೂ, ಪದೇಪದೇ ಸಂಭವಿಸುತ್ತಿರುವ ಭೀಕರ ಅಪಘಾತಗಳಿಂದಾಗಿ ರಸ್ತೆಗಳಿಗೆ ಕೆಟ್ಟ ಹೆಸರು ಬರುವಂತಾಗಿದೆ’ ಎಂದೂ ಸಮಿತಿ ತನ್ನ ವರದಿಯಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>