<p><strong>ನವದೆಹಲಿ: </strong>ಈ ತಿಂಗಳು ಹಾಗೂ ನವೆಂಬರ್ನಲ್ಲಿ ಹಬ್ಬಗಳ ಸಾಲು. ನವರಾತ್ರಿ, ದುರ್ಗಾ ಪೂಜೆ, ನಂತರ ದೀಪಾವಳಿ ಸಂಭ್ರಮ. ಆದರೆ, ಕೋವಿಡ್–19 ನಡುವೆಯೇ ಈ ಹಬ್ಬಗಳನ್ನು ಆಚರಿಸಬೇಕಾಗಿರುವ ಕಾರಣ ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಜನರಲ್ಲಿ ಜಾಗೃತಿ ಮೂಡಿಸಲು‘ಕೋವಿಡ್–19: ಸಮರ್ಪಕ ವರ್ತನೆ’ ಎಂಬ ಆಂದೋಲನ ಆರಂಭಿಸುವ ಕುರಿತು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯಕುಮಾರ್ ಭಲ್ಲಾ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ವಿವಿಧ ಸಚಿವಾಲಯಗಳು, ಕೇಂದ್ರೀಯ ಪೊಲೀಸ್ ಪಡೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಹಬ್ಬಗಳ ಸಂದರ್ಭದಲ್ಲಿ ಜನರ ಓಡಾಟ ಇನ್ನೂ ಹೆಚ್ಚಾಗುವುದು. ಕೋವಿಡ್ ವಿರುದ್ಧದ ಹೋರಾಟವನ್ನೂ ಕಡೆಗಣಿಸುವಂತಿಲ್ಲ. ಇಂಥ ಸಂದರ್ಭದಲ್ಲಿ ನಮ್ಮ ವರ್ತನೆ ಹೇಗಿರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು‘ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡುವುದು ಹಾಗೂ ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆ ವೇಳೆ ಒತ್ತು ನೀಡಲಾಯಿತು’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಈ ತಿಂಗಳು ಹಾಗೂ ನವೆಂಬರ್ನಲ್ಲಿ ಹಬ್ಬಗಳ ಸಾಲು. ನವರಾತ್ರಿ, ದುರ್ಗಾ ಪೂಜೆ, ನಂತರ ದೀಪಾವಳಿ ಸಂಭ್ರಮ. ಆದರೆ, ಕೋವಿಡ್–19 ನಡುವೆಯೇ ಈ ಹಬ್ಬಗಳನ್ನು ಆಚರಿಸಬೇಕಾಗಿರುವ ಕಾರಣ ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಜನರಲ್ಲಿ ಜಾಗೃತಿ ಮೂಡಿಸಲು‘ಕೋವಿಡ್–19: ಸಮರ್ಪಕ ವರ್ತನೆ’ ಎಂಬ ಆಂದೋಲನ ಆರಂಭಿಸುವ ಕುರಿತು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯಕುಮಾರ್ ಭಲ್ಲಾ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ವಿವಿಧ ಸಚಿವಾಲಯಗಳು, ಕೇಂದ್ರೀಯ ಪೊಲೀಸ್ ಪಡೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಹಬ್ಬಗಳ ಸಂದರ್ಭದಲ್ಲಿ ಜನರ ಓಡಾಟ ಇನ್ನೂ ಹೆಚ್ಚಾಗುವುದು. ಕೋವಿಡ್ ವಿರುದ್ಧದ ಹೋರಾಟವನ್ನೂ ಕಡೆಗಣಿಸುವಂತಿಲ್ಲ. ಇಂಥ ಸಂದರ್ಭದಲ್ಲಿ ನಮ್ಮ ವರ್ತನೆ ಹೇಗಿರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು‘ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡುವುದು ಹಾಗೂ ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆ ವೇಳೆ ಒತ್ತು ನೀಡಲಾಯಿತು’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>