ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದೆ: ರಾಹುಲ್‌ ಗಾಂಧಿ ಆರೋಪ

Last Updated 14 ಜುಲೈ 2021, 9:24 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶವನ್ನು ದುರ್ಬಲಗೊಳಿಸಿದ್ದು, ಭಾರತಕ್ಕೆ ಇಷ್ಟೊಂದು ಅಭದ್ರ ಸ್ಥಿತಿ ಎದುರಾಗಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಮತ್ತೆ ದಾಟಿದ್ದು, ಎರಡು ದೇಶಗಳ ನಡುವೆ ಘರ್ಷಣೆ ನಡೆದಿದೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ವಿದೇಶ ಹಾಗೂ ರಕ್ಷಣಾ ನೀತಿಯನ್ನು ಭಾರತ ಸರ್ಕಾರವು ದೇಶೀಯ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದ್ದು, ನಮ್ಮ ದೇಶವನ್ನು ದುರ್ಬಲಗೊಳಿಸಿದೆ. ಭಾರತ ಎಂದಿಗೂ ಇಷ್ಟೊಂದು ಅಭದ್ರ ಸ್ಥಿತಿ ಎದುರಿಸಿರಲಿಲ್ಲ' ಎಂದು ಹೇಳಿದ್ದಾರೆ.

ಏತನ್ಮಧ್ಯೆ ಪೂರ್ವ ಲಡಾಖ್‌ ಪ್ರದೇಶಗಳ ಆಕ್ರಮಣಕ್ಕಾಗಿ ಭಾರತ ಅಥವಾ ಚೀನಾ ಸೇನೆಯಿಂದ ಯಾವುದೇ ರೀತಿಯ ಪ್ರಯತ್ನಗಳೂ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿರುವ ಭಾರತೀಯ ಸೇನೆ, ಆ ಪ್ರದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ಮುಂದುವರಿದಿರುವುದಾಗಿ ತಿಳಿಸಿದೆ.

ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ಸೇನೆಗಳನ್ನು ವಾಪಸ್‌ ಕರೆಸಿಕೊಳ್ಳುವ ಕುರಿತು ಈ ವರ್ಷದ ಫೆಬ್ರುವರಿಯಲ್ಲಿ ಎರಡೂ ದೇಶಗಳ ನಡುವೆ ಒಪ್ಪಂದ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT