<p class="title"><strong>ನವದೆಹಲಿ: </strong>ತಮ್ಮ ಅನುಚಿತ ವರ್ತನೆಗಾಗಿ ಕ್ಷಮೆ ಕೋರಿದರೆ ರಾಜ್ಯಸಭೆಯ ಎಂಟು ಸದಸ್ಯರ ಅಮಾನತು ಆದೇಶವನ್ನು ಹಿಂಪಡೆಯುವುದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದರು.</p>.<p class="title">ಅಮಾನತು ಆದೇಶವನ್ನು ರದ್ದುಪಡಿಸಲು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ವಿವಿಧ ವಿರೋಧಪಕ್ಷಗಳು ಮಂಗಳವಾರ ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿ ಹೊರನಡೆದ ಹಿಂದೆಯೇ ಸಚಿವರು ಈ ಹೇಳಿಕೆ ನೀಡಿದ್ದಾರೆ.</p>.<p class="title">ಸಂಸತ್ತಿನ ಹೊರಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವ ರವಿಶಂಕರ ಪ್ರಸಾದ್ ಅವರು, ಸದಸ್ಯರ ಅನುಚಿತ ವರ್ತನೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ನಾವು ಭಾವಿಸಿದ್ದೆವು ಎಂದು ತಿಳಿಸಿದರು.</p>.<p>‘ಇದೆಂಥ ರಾಜಕಾರಣ.ರಾಜ್ಯಸಭೆಯಲ್ಲಿ ಸಂಸದರೊಬ್ಬರು ಟೇಬಲ್ ಮೇಲೆ ನಿಂತು ನರ್ತಿಸುತ್ತಾ ದಾಖಲೆ ಹರಿಯುವ ಚಿತ್ರಣವನ್ನು ನಾವು ಹಿಂದೆ ಎಂದೂ ನೋಡಿರಲಿಲ್ಲ’ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ತಮ್ಮ ಅನುಚಿತ ವರ್ತನೆಗಾಗಿ ಕ್ಷಮೆ ಕೋರಿದರೆ ರಾಜ್ಯಸಭೆಯ ಎಂಟು ಸದಸ್ಯರ ಅಮಾನತು ಆದೇಶವನ್ನು ಹಿಂಪಡೆಯುವುದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದರು.</p>.<p class="title">ಅಮಾನತು ಆದೇಶವನ್ನು ರದ್ದುಪಡಿಸಲು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ವಿವಿಧ ವಿರೋಧಪಕ್ಷಗಳು ಮಂಗಳವಾರ ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿ ಹೊರನಡೆದ ಹಿಂದೆಯೇ ಸಚಿವರು ಈ ಹೇಳಿಕೆ ನೀಡಿದ್ದಾರೆ.</p>.<p class="title">ಸಂಸತ್ತಿನ ಹೊರಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವ ರವಿಶಂಕರ ಪ್ರಸಾದ್ ಅವರು, ಸದಸ್ಯರ ಅನುಚಿತ ವರ್ತನೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ನಾವು ಭಾವಿಸಿದ್ದೆವು ಎಂದು ತಿಳಿಸಿದರು.</p>.<p>‘ಇದೆಂಥ ರಾಜಕಾರಣ.ರಾಜ್ಯಸಭೆಯಲ್ಲಿ ಸಂಸದರೊಬ್ಬರು ಟೇಬಲ್ ಮೇಲೆ ನಿಂತು ನರ್ತಿಸುತ್ತಾ ದಾಖಲೆ ಹರಿಯುವ ಚಿತ್ರಣವನ್ನು ನಾವು ಹಿಂದೆ ಎಂದೂ ನೋಡಿರಲಿಲ್ಲ’ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>