ನವದೆಹಲಿ: ಶಾಂತಿ ಕದಡುವವರ ಹಾಗೂ ಅಭಿವೃದ್ಧಿಯ ಶತ್ರುಗಳ ವಿರುದ್ಧದ ಹೋರಾಟವನ್ನು ಸರ್ಕಾರ ಮುಂದುವರಿಸುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದರು.
‘ಛತ್ತೀಸಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಮರೆಯಲಾಗದ ತ್ಯಾಗ, ಅಪ್ರತಿಮ ಶೌರ್ಯ ಮೆರೆದಿದ್ದಾರೆ. ಅವರ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ’ ಎಂದೂ ಹೇಳಿದರು.
‘ಹುತಾತ್ಮರಾದ ಯೋಧರ ಕುಟುಂಬಗಳಿಗೆ ಈ ಸಂದರ್ಭದಲ್ಲಿ ಸಾಂತ್ವನ ಹೇಳಲು ಬಯಸುವೆ. ಗಾಯಗೊಂಡಿರುವ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಶಾ ಹೇಳಿದರು.