ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಕದಡುವವರ ವಿರುದ್ಧ ಹೋರಾಟ ನಿಲ್ಲದು: ಅಮಿತ್‌ ಶಾ

Last Updated 4 ಏಪ್ರಿಲ್ 2021, 5:13 IST
ಅಕ್ಷರ ಗಾತ್ರ

ನವದೆಹಲಿ: ಶಾಂತಿ ಕದಡುವವರ ಹಾಗೂ ಅಭಿವೃದ್ಧಿಯ ಶತ್ರುಗಳ ವಿರುದ್ಧದ ಹೋರಾಟವನ್ನು ಸರ್ಕಾರ ಮುಂದುವರಿಸುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದರು.

‘ಛತ್ತೀಸಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಮರೆಯಲಾಗದ ತ್ಯಾಗ, ಅಪ್ರತಿಮ ಶೌರ್ಯ ಮೆರೆದಿದ್ದಾರೆ. ಅವರ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ’ ಎಂದೂ ಹೇಳಿದರು.

‘ಹುತಾತ್ಮರಾದ ಯೋಧರ ಕುಟುಂಬಗಳಿಗೆ ಈ ಸಂದರ್ಭದಲ್ಲಿ ಸಾಂತ್ವನ ಹೇಳಲು ಬಯಸುವೆ. ಗಾಯಗೊಂಡಿರುವ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT