ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ಸಂಹಿತೆ) ನಿಯಮಗಳು– 2021ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಉದ್ದೇಶಿಸಿತ್ತು. ಮಾರ್ಗಸೂಚಿಗಳ ಉಲ್ಲಂಘನೆ ಕಾರಣ ನೀಡಿ, ಕೆಲ ಸಾಮಾಜಿಕ ಮಾಧ್ಯಮಗಳು ಗಣ್ಯರು ಸೇರಿದಂತೆ ಅನೇಕ ಬಳಕೆದಾರರ ಖಾತೆಗಳನ್ನು ಸ್ಥಗಿತಗೊಳಿಸಿರುವ ನಿದರ್ಶನಗಳಿವೆ. ಹೀಗಾಗಿ, ಕುಂದುಕೊರತೆ ಮೇಲ್ಮನವಿ ಸಮಿತಿ ರಚಿಸುವ ಕುರಿತು ಕೇಂದ್ರ ಪ್ರಸ್ತಾವ ಮಾಡಿತ್ತು.