<p class="title"><strong>ಜೈಪುರ: </strong>‘ನನ್ನ ನೇತೃತ್ವದ ಕೇಂದ್ರ ಸರ್ಕಾರವು ಎಂಟು ವರ್ಷದಲ್ಲಿ ಉತ್ತಮ ಆಡಳಿತ, ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಬಿಜೆಪಿ ಮುಂದಿನ 25 ವರ್ಷಕ್ಕೆ ಗುರಿ ನಿಗದಿಪಡಿಸಲು, ಆ ನಿಟ್ಟಿನಲ್ಲಿ ಕೆಲಸ ಮಾಡಲು ಇದು ಸಕಾಲ’ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.</p>.<p class="title">‘ಪ್ರಸ್ತುತ, ವಿರೋಧಪಕ್ಷಗಳು ದೇಶದ ಗಮನವನ್ನು ಅಭಿವೃದ್ಧಿಯಿಂದ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿವೆ. ಬಿಜೆಪಿಯ ಮುಖಂಡರು ಇಂತಹ ಹುನ್ನಾರಗಳಿಗೆ ಬಲಿಯಾಗದೇ ರಾಷ್ಟ್ರ ಹಿತದ ಮುಖ್ಯ ವಿಷಯಗಳಿಗೆ ಬದ್ಧರಾಗಬೇಕು’ ಎಂದು ಕಿವಿಮಾತು ಹೇಳಿದ್ದಾರೆ.</p>.<p>ಬಿಜೆಪಿ ಅಭಿವೃದ್ಧಿಯನ್ನು ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದಿದೆ. ಆದರೆ, ಕೆಲ ರಾಜಕೀಯ ಪಕ್ಷಗಳು ತಮ್ಮ ಅನುಕೂಲಕ್ಕಾಗಿ ದೇಶದ ಭವಿಷ್ಯದ ಜೊತೆಗೆ ಆಟವಾಡುತ್ತಿವೆ ಎಂದು ಅವರು ಯಾವುದೇ ಪಕ್ಷದ ಹೆಸರು ಉಲ್ಲೇಖಿಸದೇ ಟೀಕಿಸಿದರು.</p>.<p>ಕೇಂದ್ರ ಸರ್ಕಾರವು 8 ವರ್ಷದ ಆಡಳಿತ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರು ಇಲ್ಲಿ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚುವಲ್ ರೂಪದಲ್ಲಿ ಮಾತನಾಡಿದರು.</p>.<p>‘ಪಕ್ಷದ ಮುಖಂಡರು ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ ಹೊರತುಪಡಿಸಿ, ಇತರೆ ಅಂಶಗಳಿಗೆ ಗಮನ ಕೊಡಬಾರದು’ ಎಂದರು. ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲಿ ಈ ಹೇಳಿಕೆ ಗಮನಾರ್ಹವಾಗಿದೆ.</p>.<p>ವಿರೋಧಪಕ್ಷಗಳು ಸ್ವಹಿತಾಸಕ್ತಿಗಾಗಿ ಸಮಾಜದ ಸಣ್ಣ ದೌರ್ಬಲ್ಯ, ಉದ್ವಿಗ್ನತೆಗಳನ್ನು ಬಳಸಿಕೊಂಡು ವಿಷ ಕಕ್ಕುತ್ತಿವೆ. ಕೆಲವೊಂದು ಬಾರಿ ಜಾತಿ, ಧರ್ಮದ ಆಧಾರದಲ್ಲಿಯೂ ಅವು ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.</p>.<p>‘ಏಕ್ ಭಾರತ್, ಶ್ರೇಷ್ಠ ಭಾರತ್’ ಕುರಿತು ಕನಸು ಸಾಕಾರಗೊಳಿಸಲು ಇಂಥ ಯತ್ನದ ವಿರುದ್ಧ ಜಾಗೃತರಾಗಿರುವಂತೆ ಜನರನ್ನು ಎಚ್ಚರಿಸುವುದು ಅಗತ್ಯ. ಜನಸಂಘದ ಕಾಲದಿಂದಲೂ ರಾಷ್ಟ್ರದ ಹಿತಾಸಕ್ತಿ, ದೇಶ ನಿರ್ಮಾಣವೇ ಪಕ್ಷದ ಕಾರ್ಯಕ್ರಮಗಳ ಕೇಂದ್ರವಾಗಿದೆ ಎಂದು ಹೇಳಿದರು.</p>.<p><strong>‘ದೇಶದ ಎಲ್ಲ ಭಾಷೆಗಳು ‘ಭಾರತೀಯ’</strong></p>.<p><strong>ಜೈಪುರ (ಪಿಟಿಐ):</strong> ‘ಭಾರತದ ಎಲ್ಲ ಭಾಷೆಗಳು ‘ಭಾರತೀಯ’ ಎಂದು ಬಿಜೆಪಿ ಪರಿಗಣಿಸಲಿದೆ ಮತ್ತು ಗೌರವಿಸಲು ಅರ್ಹವಾದುದು ಎಂದು ಭಾವಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾಷೆಯ ವಿಷಯದಲ್ಲಿ ಪ್ರಚೋದನೆ ಉಂಟು ಮಾಡುವ ಯತ್ನಗಳ ವಿರುದ್ಧ ಜನರನ್ನು ಜಾಗೃತಗೊಳಿಸಬೇಕು ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದರು. ‘ಪ್ರತಿ ಭಾಷೆಯಲ್ಲಿಯೂ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವುದನ್ನು ಬಿಜೆಪಿ ಕಾಣುತ್ತಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಸ್ಥಳೀಯ ಭಾಷೆಗಳಿಗೆ ಪ್ರಾಧ್ಯಾನ್ಯತೆ ನೀಡಲಾಗಿದೆ. ಇದು, ಎಲ್ಲ ಭಾಷೆಗಳ ಕುರಿತು ನಮಗಿರುವ ಬದ್ಧತೆಯಾಗಿದೆ. ರಾಷ್ಟ್ರೀಯ ಹೆಮ್ಮೆಯಾಗಿ ದೇಶದ ಸಂಸ್ಕೃತಿ, ಭಾಷಾ ವೈವಿಧ್ಯವನ್ನು ಬಿಂಬಿಸಿದ್ದೇ ಬಿಜೆಪಿ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಪುರ: </strong>‘ನನ್ನ ನೇತೃತ್ವದ ಕೇಂದ್ರ ಸರ್ಕಾರವು ಎಂಟು ವರ್ಷದಲ್ಲಿ ಉತ್ತಮ ಆಡಳಿತ, ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಬಿಜೆಪಿ ಮುಂದಿನ 25 ವರ್ಷಕ್ಕೆ ಗುರಿ ನಿಗದಿಪಡಿಸಲು, ಆ ನಿಟ್ಟಿನಲ್ಲಿ ಕೆಲಸ ಮಾಡಲು ಇದು ಸಕಾಲ’ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.</p>.<p class="title">‘ಪ್ರಸ್ತುತ, ವಿರೋಧಪಕ್ಷಗಳು ದೇಶದ ಗಮನವನ್ನು ಅಭಿವೃದ್ಧಿಯಿಂದ ಬೇರೆಡೆಗೆ ಸೆಳೆಯಲು ಯತ್ನಿಸುತ್ತಿವೆ. ಬಿಜೆಪಿಯ ಮುಖಂಡರು ಇಂತಹ ಹುನ್ನಾರಗಳಿಗೆ ಬಲಿಯಾಗದೇ ರಾಷ್ಟ್ರ ಹಿತದ ಮುಖ್ಯ ವಿಷಯಗಳಿಗೆ ಬದ್ಧರಾಗಬೇಕು’ ಎಂದು ಕಿವಿಮಾತು ಹೇಳಿದ್ದಾರೆ.</p>.<p>ಬಿಜೆಪಿ ಅಭಿವೃದ್ಧಿಯನ್ನು ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದಿದೆ. ಆದರೆ, ಕೆಲ ರಾಜಕೀಯ ಪಕ್ಷಗಳು ತಮ್ಮ ಅನುಕೂಲಕ್ಕಾಗಿ ದೇಶದ ಭವಿಷ್ಯದ ಜೊತೆಗೆ ಆಟವಾಡುತ್ತಿವೆ ಎಂದು ಅವರು ಯಾವುದೇ ಪಕ್ಷದ ಹೆಸರು ಉಲ್ಲೇಖಿಸದೇ ಟೀಕಿಸಿದರು.</p>.<p>ಕೇಂದ್ರ ಸರ್ಕಾರವು 8 ವರ್ಷದ ಆಡಳಿತ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರು ಇಲ್ಲಿ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ವರ್ಚುವಲ್ ರೂಪದಲ್ಲಿ ಮಾತನಾಡಿದರು.</p>.<p>‘ಪಕ್ಷದ ಮುಖಂಡರು ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ ಹೊರತುಪಡಿಸಿ, ಇತರೆ ಅಂಶಗಳಿಗೆ ಗಮನ ಕೊಡಬಾರದು’ ಎಂದರು. ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲಿ ಈ ಹೇಳಿಕೆ ಗಮನಾರ್ಹವಾಗಿದೆ.</p>.<p>ವಿರೋಧಪಕ್ಷಗಳು ಸ್ವಹಿತಾಸಕ್ತಿಗಾಗಿ ಸಮಾಜದ ಸಣ್ಣ ದೌರ್ಬಲ್ಯ, ಉದ್ವಿಗ್ನತೆಗಳನ್ನು ಬಳಸಿಕೊಂಡು ವಿಷ ಕಕ್ಕುತ್ತಿವೆ. ಕೆಲವೊಂದು ಬಾರಿ ಜಾತಿ, ಧರ್ಮದ ಆಧಾರದಲ್ಲಿಯೂ ಅವು ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.</p>.<p>‘ಏಕ್ ಭಾರತ್, ಶ್ರೇಷ್ಠ ಭಾರತ್’ ಕುರಿತು ಕನಸು ಸಾಕಾರಗೊಳಿಸಲು ಇಂಥ ಯತ್ನದ ವಿರುದ್ಧ ಜಾಗೃತರಾಗಿರುವಂತೆ ಜನರನ್ನು ಎಚ್ಚರಿಸುವುದು ಅಗತ್ಯ. ಜನಸಂಘದ ಕಾಲದಿಂದಲೂ ರಾಷ್ಟ್ರದ ಹಿತಾಸಕ್ತಿ, ದೇಶ ನಿರ್ಮಾಣವೇ ಪಕ್ಷದ ಕಾರ್ಯಕ್ರಮಗಳ ಕೇಂದ್ರವಾಗಿದೆ ಎಂದು ಹೇಳಿದರು.</p>.<p><strong>‘ದೇಶದ ಎಲ್ಲ ಭಾಷೆಗಳು ‘ಭಾರತೀಯ’</strong></p>.<p><strong>ಜೈಪುರ (ಪಿಟಿಐ):</strong> ‘ಭಾರತದ ಎಲ್ಲ ಭಾಷೆಗಳು ‘ಭಾರತೀಯ’ ಎಂದು ಬಿಜೆಪಿ ಪರಿಗಣಿಸಲಿದೆ ಮತ್ತು ಗೌರವಿಸಲು ಅರ್ಹವಾದುದು ಎಂದು ಭಾವಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾಷೆಯ ವಿಷಯದಲ್ಲಿ ಪ್ರಚೋದನೆ ಉಂಟು ಮಾಡುವ ಯತ್ನಗಳ ವಿರುದ್ಧ ಜನರನ್ನು ಜಾಗೃತಗೊಳಿಸಬೇಕು ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದರು. ‘ಪ್ರತಿ ಭಾಷೆಯಲ್ಲಿಯೂ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವುದನ್ನು ಬಿಜೆಪಿ ಕಾಣುತ್ತಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಸ್ಥಳೀಯ ಭಾಷೆಗಳಿಗೆ ಪ್ರಾಧ್ಯಾನ್ಯತೆ ನೀಡಲಾಗಿದೆ. ಇದು, ಎಲ್ಲ ಭಾಷೆಗಳ ಕುರಿತು ನಮಗಿರುವ ಬದ್ಧತೆಯಾಗಿದೆ. ರಾಷ್ಟ್ರೀಯ ಹೆಮ್ಮೆಯಾಗಿ ದೇಶದ ಸಂಸ್ಕೃತಿ, ಭಾಷಾ ವೈವಿಧ್ಯವನ್ನು ಬಿಂಬಿಸಿದ್ದೇ ಬಿಜೆಪಿ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>