ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮ್ಮ ವೈಫಲ್ಯಕ್ಕೆ ಬಿಜೆಪಿ ಈಗ ನೆಹರೂರನ್ನು ದೂಷಣೆ ಮಾಡುವಂತಿಲ್ಲ: ಪ್ರಿಯಾಂಕಾ

ಲಸಿಕೆ ಕಾರ್ಯಕ್ರಮ ಜಾರಿಗೆ ಸಿದ್ಧತೆ ಕೊರತೆ: ಆರೋಪ
Last Updated 21 ಏಪ್ರಿಲ್ 2021, 13:51 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19ನ ಎರಡನೇ ಅಲೆ ಎದುರಿಸುವ ಸಂಬಂಧ ಕೇಂದ್ರ ಸರ್ಕಾರ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

‘ಜವಾಹರಲಾಲ್‌ ನೆಹರೂ ಈಗ ಆಡಳಿತ ನಡೆಸುತ್ತಿಲ್ಲ. ಹೀಗಾಗಿ ತಮ್ಮ ವೈಫಲ್ಯಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಈಗ ನೆಹರೂ ಅವರನ್ನು ದೂಷಿಸುವಂತಿಲ್ಲ ಎಂದೂ ಕುಟುಕಿದ್ದಾರೆ.

‘ಲಸಿಕೆ ನೀಡುವ ಕಾರ್ಯಕ್ರಮವನ್ನು ಸರಿಯಾಗಿ ನಿಭಾಯಿಸಿಲ್ಲ. ಹಿಂದಿನ ವರ್ಷಗಳಲ್ಲಿ ಆಮ್ಲಜನಕದ ರಫ್ತಿಗೆ ಸರ್ಕಾರ ಒತ್ತು ನೀಡಿತು. ಈಗ ತನ್ನ ದೇಶದ ಜನರೇ ತತ್ತರಿಸುತ್ತಿದ್ದರೂ ಅವರಿಗೆ ಆಮ್ಲಜನಕ ಪೂರೈಸುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಅವರು, ‘ವಿರೋಧ ಪಕ್ಷಗಳು ನೀಡುವ ರಚನಾತ್ಮಕ ಸಲಹೆಗಳನ್ನು ಈ ಸರ್ಕಾರ ತಿರಸ್ಕರಿಸುತ್ತದೆ. ಅದಕ್ಕೆ ರಾಜಕೀಯ ಬಣ್ಣ ನೀಡುತ್ತದೆ’ ಎಂದರು.

‘ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಬರೆದ ಪತ್ರಕ್ಕೆ ತಮ್ಮ ಸಂಪುಟದ ಸಚಿವರೊಬ್ಬರಿಂದ ಉತ್ತರ ಕೊಡಿಸಲಾಗುತ್ತದೆ’ ಎಂದೂ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT