ಎಂ.ನಾಗರಾಜ್ (2006) ಮತ್ತು ಜರ್ನೈಲ್ ಸಿಂಗ್ (2018) ಪ್ರಕರಣಗಳಲ್ಲಿ ಈ ಹಿಂದೆ ರೂಪಿಸಿರುವ ಮಾನದಂಡಗಳಲ್ಲಿ ಕಡಿತಗೊಳಿಸುವುದು ಸಾಧ್ಯವಿಲ್ಲ. ಹಾಗೇ ಹೊಸ ಮಾನದಂಡಗಳನ್ನು ರೂಪಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್ ಖನ್ನಾ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.