ಶ್ರೀನಗರ: ಬಂಡಿಪೋರ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 10.20ರ ಸುಮಾರಿಗೆ ಉಗ್ರರು ಸುಂಬಾಲ್ನಲ್ಲಿರುವ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಸೇನಾ ಪಡೆಗಳನ್ನು ಗುರಿಯಾಗಿಸಿ ಗ್ರೆನೇಡ್ಗಳನ್ನು ಎಸೆದಿದ್ದಾರೆ. ಗುರಿ ತಪ್ಪಿ ರಸ್ತೆ ಪಕ್ಕದಲ್ಲಿ ಸ್ಫೋಟಗೊಂಡಿವೆ. ಈ ಘಟನೆಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ‘ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.