<p><strong>ಅಹಮದಾಬಾದ್: </strong>‘ಗುಜರಾತ್ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ನನಗೆ ಅಸಮಾಧಾನವಿಲ್ಲ‘ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ತಿಳಿಸಿದರು.</p>.<p>ನಿಯೋಜಿತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಲ್ಲಿ ಸೋಮವಾರ ನಿತಿನ್ ಪಟೇಲ್ ಅವರನ್ನು ಭೇಟಿ ಮಾಡಿದ್ದರು. ನಂತರ ‘ಪಕ್ಷದ ನಿರ್ಧಾರ ನಿಮಗೆ ಬೇಸರ ತಂದಿದೆಯೇ‘ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ನನಗೆ ಯಾವ ಜವಾಬ್ದಾರಿಯನ್ನು ಕೊಟ್ಟರೂ ನಿರ್ವಹಿಸುವೆ. ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರದಲ್ಲಿ ನೀವು (ಮಾಧ್ಯಮದವರು) ಊಹಾ ಪೋಹಗಳನ್ನು ಹಬ್ಬಿಸುತ್ತಿದ್ದೀರಿ. ಏಕೆಂದರೆ ಅದು ನಿಮ್ಮ ವೃತ್ತಿ‘ ಎಂದರು.</p>.<p>‘ಸ್ಥಾನ–ಮಾನಗಳು ಸಿಗುವುದು ನನಗೆ ದೊಡ್ಡ ವಿಷಯವಲ್ಲ. ಜನರ ಪ್ರೀತಿ ಮತ್ತು ಗೌರವ ಬಹಳ ಮುಖ್ಯ. ನಾವೆಲ್ಲರೂ ಸಹೋದರ ಸಹೋದರಿಯರು. ಮುಂದಿನ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಾಗಿದೆಯೋ ಅವರು ನಮ್ಮವರೇ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ‘ ಎಂದು ನಿತಿನ್ ಪಟೇಲ್ ಹೇಳಿದರು.</p>.<p>‘ಜನಸಂಘ‘ದ ಕಾಲದಿಂದಲೂ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ನಿತಿನ್ ಪಟೇಲ್ ಅವರು ತಮ್ಮ 18ನೇ ವಯಸ್ಸಿಗೆ ರಾಜಕೀಯಕ್ಕೆ ಸೇರಿದ್ದರು. ಮುಖ್ಯಮಂತ್ರಿ ಅಭ್ಯರ್ಥಿಯ ಸ್ಪರ್ಧೆಯಲ್ಲಿ ಇವರ ಹೆಸರು ಕೇಳಿಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>‘ಗುಜರಾತ್ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ನನಗೆ ಅಸಮಾಧಾನವಿಲ್ಲ‘ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ತಿಳಿಸಿದರು.</p>.<p>ನಿಯೋಜಿತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಲ್ಲಿ ಸೋಮವಾರ ನಿತಿನ್ ಪಟೇಲ್ ಅವರನ್ನು ಭೇಟಿ ಮಾಡಿದ್ದರು. ನಂತರ ‘ಪಕ್ಷದ ನಿರ್ಧಾರ ನಿಮಗೆ ಬೇಸರ ತಂದಿದೆಯೇ‘ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ನನಗೆ ಯಾವ ಜವಾಬ್ದಾರಿಯನ್ನು ಕೊಟ್ಟರೂ ನಿರ್ವಹಿಸುವೆ. ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರದಲ್ಲಿ ನೀವು (ಮಾಧ್ಯಮದವರು) ಊಹಾ ಪೋಹಗಳನ್ನು ಹಬ್ಬಿಸುತ್ತಿದ್ದೀರಿ. ಏಕೆಂದರೆ ಅದು ನಿಮ್ಮ ವೃತ್ತಿ‘ ಎಂದರು.</p>.<p>‘ಸ್ಥಾನ–ಮಾನಗಳು ಸಿಗುವುದು ನನಗೆ ದೊಡ್ಡ ವಿಷಯವಲ್ಲ. ಜನರ ಪ್ರೀತಿ ಮತ್ತು ಗೌರವ ಬಹಳ ಮುಖ್ಯ. ನಾವೆಲ್ಲರೂ ಸಹೋದರ ಸಹೋದರಿಯರು. ಮುಂದಿನ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಾಗಿದೆಯೋ ಅವರು ನಮ್ಮವರೇ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ‘ ಎಂದು ನಿತಿನ್ ಪಟೇಲ್ ಹೇಳಿದರು.</p>.<p>‘ಜನಸಂಘ‘ದ ಕಾಲದಿಂದಲೂ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ನಿತಿನ್ ಪಟೇಲ್ ಅವರು ತಮ್ಮ 18ನೇ ವಯಸ್ಸಿಗೆ ರಾಜಕೀಯಕ್ಕೆ ಸೇರಿದ್ದರು. ಮುಖ್ಯಮಂತ್ರಿ ಅಭ್ಯರ್ಥಿಯ ಸ್ಪರ್ಧೆಯಲ್ಲಿ ಇವರ ಹೆಸರು ಕೇಳಿಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>