<p><strong>ಗೋಧ್ರಾ: </strong>2002ರಲ್ಲಿ ಗುಜರಾತ್ನ ಇತಿಹಾಸದಲ್ಲೇ ಅತ್ಯಂತ ಭೀಕರ ಗಲಭೆಗೆ ಕಾರಣವಾಗಿದ್ದ 59 ಕರಸೇವಕರನ್ನು ಹತ್ಯೆಗೈದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>ಗುಜರಾತ್ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆರೋಪಿ ರಫೀಕ್ ಬಟುಕ್ಗೆ ಶನಿವಾರ ಜೀವಾವಧಿ ಶಿಕ್ಷೆಯನ್ನು ವಿಧಿಸಿತು. ಆತನನ್ನು 2021ರ ಫೆಬ್ರುವರಿಯಲ್ಲಿ ಬಂಧಿಸಲಾಗಿತ್ತು.</p>.<p>ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ, ಕರಸೇವಕರಿದ್ದ ರೈಲಿಗೆ 2002ರ ಫೆಬ್ರುವರಿ 27ರಂದು ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಕರಸೇವಕರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ರಫೀಕ್ ಭಾಗಿಯಾಗಿದ್ದ ಎಂದು ಆರೋಪಿಸಲಾಗಿತ್ತು. ಗೋಧ್ರಾದ ಈ ಘಟನೆಯು ರಾಜ್ಯದಲ್ಲಿ ಕೋಮು ಗಲಭೆಗೆ ಕಾರಣವಾಯಿತಲ್ಲದೇ, 1,200 ಕ್ಕೂ ಹೆಚ್ಚು ಜನ ಕೊಲ್ಲಲ್ಪಟ್ಟರು. ಇದರಲ್ಲಿ ಬಹುತೇಕರು ಅಲ್ಪಸಂಖ್ಯಾತ ಸಮುದಾಯದವರೇ ಆಗಿದ್ದರು.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಇದುವರೆಗೆ ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟ 35 ನೇ ಆರೋಪಿ ಬಟುಕ್ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಆರ್ಸಿ ಕೊಡೇಕರ್ ತಿಳಿಸಿದ್ದಾರೆ.</p>.<p>ಪಂಚಮಹಲ್ ಪೊಲೀಸರ ವಿಶೇಷ ತಂಡ (ಎಸ್ಒಜಿ) ಕಳೆದ ವರ್ಷ ಫೆಬ್ರುವರಿಯಲ್ಲಿ ಗೋಧ್ರಾದಲ್ಲೇ ಬಟುಕ್ನನ್ನು ಬಂಧಿಸಿತ್ತು. ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲ್ಪಟ್ಟ ಬಟುಕ್, ಗೋಧ್ರಾದಿಂದ ಪರಾರಿಯಾಗಿ ಹಲವು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ.</p>.<p>ಇದಕ್ಕೂ ಮೊದಲು, ವಿಶೇಷ ಎಸ್ಐಟಿ ನ್ಯಾಯಾಲಯವು 2011ರ ಮಾರ್ಚ್ 1ರಂದು ಪ್ರಕರಣದಲ್ಲಿ 31 ಜನರನ್ನು ದೋಷಿ ಎಂದು ಘೋಷಿಸಿತ್ತು. ಅವರಲ್ಲಿ 11 ಜನರಿಗೆ ಮರಣದಂಡನೆ ಮತ್ತು 20 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.</p>.<p>2017ರ ಅಕ್ಟೋಬರ್ನಲ್ಲಿ ಗುಜರಾತ್ ಹೈಕೋರ್ಟ್ 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಇನ್ನಿತರ 20 ಜನರಿಗೆ ವಿಶೇಷ ಎಸ್ಐಟಿ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ ಇನ್ನೂ ಮೂವರು ಅಪರಾಧಿಗಳಿಗೆ ಇದೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಧ್ರಾ: </strong>2002ರಲ್ಲಿ ಗುಜರಾತ್ನ ಇತಿಹಾಸದಲ್ಲೇ ಅತ್ಯಂತ ಭೀಕರ ಗಲಭೆಗೆ ಕಾರಣವಾಗಿದ್ದ 59 ಕರಸೇವಕರನ್ನು ಹತ್ಯೆಗೈದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>ಗುಜರಾತ್ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆರೋಪಿ ರಫೀಕ್ ಬಟುಕ್ಗೆ ಶನಿವಾರ ಜೀವಾವಧಿ ಶಿಕ್ಷೆಯನ್ನು ವಿಧಿಸಿತು. ಆತನನ್ನು 2021ರ ಫೆಬ್ರುವರಿಯಲ್ಲಿ ಬಂಧಿಸಲಾಗಿತ್ತು.</p>.<p>ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ, ಕರಸೇವಕರಿದ್ದ ರೈಲಿಗೆ 2002ರ ಫೆಬ್ರುವರಿ 27ರಂದು ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಕರಸೇವಕರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ರಫೀಕ್ ಭಾಗಿಯಾಗಿದ್ದ ಎಂದು ಆರೋಪಿಸಲಾಗಿತ್ತು. ಗೋಧ್ರಾದ ಈ ಘಟನೆಯು ರಾಜ್ಯದಲ್ಲಿ ಕೋಮು ಗಲಭೆಗೆ ಕಾರಣವಾಯಿತಲ್ಲದೇ, 1,200 ಕ್ಕೂ ಹೆಚ್ಚು ಜನ ಕೊಲ್ಲಲ್ಪಟ್ಟರು. ಇದರಲ್ಲಿ ಬಹುತೇಕರು ಅಲ್ಪಸಂಖ್ಯಾತ ಸಮುದಾಯದವರೇ ಆಗಿದ್ದರು.</p>.<p>ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಇದುವರೆಗೆ ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟ 35 ನೇ ಆರೋಪಿ ಬಟುಕ್ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಆರ್ಸಿ ಕೊಡೇಕರ್ ತಿಳಿಸಿದ್ದಾರೆ.</p>.<p>ಪಂಚಮಹಲ್ ಪೊಲೀಸರ ವಿಶೇಷ ತಂಡ (ಎಸ್ಒಜಿ) ಕಳೆದ ವರ್ಷ ಫೆಬ್ರುವರಿಯಲ್ಲಿ ಗೋಧ್ರಾದಲ್ಲೇ ಬಟುಕ್ನನ್ನು ಬಂಧಿಸಿತ್ತು. ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲ್ಪಟ್ಟ ಬಟುಕ್, ಗೋಧ್ರಾದಿಂದ ಪರಾರಿಯಾಗಿ ಹಲವು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ.</p>.<p>ಇದಕ್ಕೂ ಮೊದಲು, ವಿಶೇಷ ಎಸ್ಐಟಿ ನ್ಯಾಯಾಲಯವು 2011ರ ಮಾರ್ಚ್ 1ರಂದು ಪ್ರಕರಣದಲ್ಲಿ 31 ಜನರನ್ನು ದೋಷಿ ಎಂದು ಘೋಷಿಸಿತ್ತು. ಅವರಲ್ಲಿ 11 ಜನರಿಗೆ ಮರಣದಂಡನೆ ಮತ್ತು 20 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.</p>.<p>2017ರ ಅಕ್ಟೋಬರ್ನಲ್ಲಿ ಗುಜರಾತ್ ಹೈಕೋರ್ಟ್ 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಇನ್ನಿತರ 20 ಜನರಿಗೆ ವಿಶೇಷ ಎಸ್ಐಟಿ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ ಇನ್ನೂ ಮೂವರು ಅಪರಾಧಿಗಳಿಗೆ ಇದೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>