ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ, ದಾದ್ರ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವರಾದ ಪುರುಷೋತ್ತಮ ರೂಪಾಲ ಮತ್ತು ಮನ್ಸುಖ್ ಮಾಂಡವೀಯ ಅವರ ಹೆಸರು ಕೇಳಿಬರುತ್ತಿದೆ. ಈ ಇಬ್ಬರೂ ನಾಯಕರು ಪಾಟೀದಾರ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಕೃಷಿ ಸಚಿವ ಆರ್.ಸಿ.ಫಾಲ್ದು ಅವರ ಹೆಸರೂ ಕೇಳಿಬರುತ್ತಿದೆ.