ಭರೂಚ ಕ್ಷೇತ್ರದಿಂದ ಆರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದ ವಸಾವಾ ಅವರು ತಮ್ಮ ರಾಜೀನಾಮೆ ಕುರಿತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ,‘ನನ್ನ ತಪ್ಪಿನಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ.ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸಂಸದನ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.