‘ಕೋವಿಡ್ ನಂತರ ಗುಜರಾತ್ ರಾಜ್ಯ ಸಾಕಷ್ಟು ತೊಂದರೆ ಅನುಭವಿಸಿತು, ಆದರೂ ರಾಜ್ಯವನ್ನು ಸಶಕ್ತಗೊಳಿಸಲು ಮುಖ್ಯಮಂತ್ರಿ ರೂಪಾನಿ ಅವರು ಯಾವುದೇ ಪರಿಹಾರ ಕ್ರಮಗಳನ್ನು ಜಾರಿಗೊಳಿಸಲಿಲ್ಲ. ಯಾವುದೇ ನಷ್ಟ ಪರಿಹಾರವನ್ನು ಜನಕ್ಕೆ ನೀಡಲಿಲ್ಲ. ಇದರಿಂದ ಅವರನ್ನು ಕಿತ್ತೊಗೆಯಲಾಗಿದೆ. ಸಚಿವ ನಿತಿನ್ ಪಟೇಲ್ ಅವರನ್ನೂ ಕಿತ್ತೊಗೆಯಬೇಕು. ಅವರು ಕೂಡ ಯಾವುದೇ ಕೆಲಸ ಮಾಡಿಲ್ಲ‘ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಭರತ್ ಸೋಲಂಕಿ ಹೇಳಿದ್ದಾರೆ.