ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನ ಕಾರ್ಯವೈಖರಿ ನನಗೆ ಸಂತೋಷ ನೀಡಿಲ್ಲ. ಜನಸಾಮಾನ್ಯರಲ್ಲಿ ಜನಪ್ರಿಯವಾಗಿರುವವರಿಗೆ ಟಿಕೆಟ್ ನೀಡುವ ಬದಲು, ಪಕ್ಷದ ನಾಯಕತ್ವವು ಅವರಿಗೆ ನಿಷ್ಠರಾಗಿರುವವರಿಗೆ ಮಾತ್ರ ಆದ್ಯತೆ ನೀಡುತ್ತಿತ್ತು. ಭವಿಷ್ಯದಲ್ಲಿ ನನಗೆ ಟಿಕೆಟ್ ನಿರಾಕರಿಸಬಹುದು ಎಂಬ ಭಯ ನನಗಿದೆ. ಈ ಕಾರಣದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ’ ಎಂದು ಹೇಳಿದರು.