<p><strong>ಅಹಮದಾಬಾದ್:</strong> ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಳಿಕ ಕಾಂಗ್ರೆಸ್ನ ಗುಜರಾತ್ ಘಟಕದ ಅಧ್ಯಕ್ಷ ಅಮಿತ್ ಚಾವ್ಡಾ ಹಾಗೂ ಶಾಸಕಾಂಗ ಪಕ್ಷದ ನಾಯಕ ಪರೇಶ್ ಧನಾನಿ ರಾಜೀನಾಮೆ ನೀಡಿದ್ದಾರೆ.</p>.<p>ಜನರು ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಷಯಗಳ ಬಗ್ಗೆ ತನಿಖೆಯಾಗಬೇಕು ಎಂದು ಅಮಿತ್ ಚಾವ್ಡಾ ಆಗ್ರಹಿಸಿದ್ದಾರೆ.</p>.<p>‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಚುನಾವಣೆ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಅಮಿತ್ ತಿಳಿಸಿದ್ದಾರೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲಿದ್ದೇನೆ ಎಂದೂ ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/gujarat-local-body-election-results-2021-bjp-leading-counting-of-votes-for-polls-to-81-809855.html" itemprop="url">ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿ ಹಿಡಿತದಲ್ಲಿ ಪಂಚಾಯಿತಿಗಳು!</a></p>.<p>ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಎಲ್ಲ 31 ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಜಯ ಗಳಿಸಿದೆ. 81 ಪಾಲಿಕೆಗಳ ಪೈಕಿ 70ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 231 ತಾಲ್ಲೂಕು ಪಂಚಾಯಿತಿಗಳಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ಗಿಂತ ಮುನ್ನಡೆ ಸಾಧಿಸಿದೆ.</p>.<p>ಈವರೆಗೆ ಫಲಿತಾಂಶ ಘೋಷಣೆಯಾದ 8,474 ಸ್ಥಾನಗಳ ಪೈಕಿ ಬಿಜೆಪಿ 6,110ರಲ್ಲಿ ಜಯ ಗಳಿಸಿದೆ.</p>.<p>ಕಾಂಗ್ರೆಸ್ ಕೇವಲ 1,768ರಲ್ಲಿ ಗೆದ್ದಿದ್ದು, ಕೇವಲ 3 ಪಾಲಿಕೆಗಳಲ್ಲಿ ಗೆಲುವು ಸಾಧಿಸಿದೆ. ಜಿಲ್ಲಾ ಪಂಚಾಯಿತಿಗಳಲ್ಲಿ ಖಾತೆ ತೆರೆಯುವುದೇ ಪಕ್ಷಕ್ಕೆ ಸಾಧ್ಯವಾಗಿಲ್ಲ. ಕೆಲವೇ ತಾಲ್ಲೂಕು ಪಂಚಾಯಿತಿಗಳಲ್ಲಿ ಜಯ ಗಳಿಸುವುದಷ್ಟೇ ಪಕ್ಷಕ್ಕೆ ಸಾಧ್ಯವಾಗಿದೆ.</p>.<p><strong>ಓದಿ:</strong><a href="https://www.prajavani.net/india-news/unemployment-high-in-india-due-to-governments-ill-considered-demonetisation-decision-says-manmohan-809868.html" itemprop="url">ನೋಟು ಅಮಾನ್ಯೀಕರಣದಿಂದ ಅನೌಪಚಾರಿಕ ವಲಯಕ್ಕೆ ಸಂಕಷ್ಟ: ಮನಮೋಹನ್ ಸಿಂಗ್</a></p>.<p>‘ಚುನಾವಣೆ ಫಲಿತಾಂಶವು ನಮ್ಮ ನಿರೀಕ್ಷೆಗಿಂತ ಸಂಪೂರ್ಣ ಭಿನ್ನವಾಗಿದೆ. ಪ್ರಚಾರದ ವೇಳೆ ಜನರಿಂದ ಉತ್ತಮ ಸ್ಪಂದನೆ ದೊರೆತಿತ್ತು. ಆದರೆ ಫಲಿತಾಂಶದಲ್ಲಿ ಅದು ಕಾಣಿಸುತ್ತಿಲ್ಲ. ಜನರು ಇವಿಎಂ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಚಾರಗಳೂ ತನಿಖೆಯಾಗಲಿ’ ಎಂದು ಅಮಿತ್ ಹೇಳಿದ್ದಾರೆ.</p>.<p>ಇಬ್ಬರು ನಾಯರು ರಾಜೀನಾಮೆ ನೀಡಿರುವುದು ನಿಜ. ಆ ಬಗ್ಗೆ ಪಕ್ಷದ ಉನ್ನತ ನಾಯಕತ್ವ ಮುಂದಿನ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಳಿಕ ಕಾಂಗ್ರೆಸ್ನ ಗುಜರಾತ್ ಘಟಕದ ಅಧ್ಯಕ್ಷ ಅಮಿತ್ ಚಾವ್ಡಾ ಹಾಗೂ ಶಾಸಕಾಂಗ ಪಕ್ಷದ ನಾಯಕ ಪರೇಶ್ ಧನಾನಿ ರಾಜೀನಾಮೆ ನೀಡಿದ್ದಾರೆ.</p>.<p>ಜನರು ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಷಯಗಳ ಬಗ್ಗೆ ತನಿಖೆಯಾಗಬೇಕು ಎಂದು ಅಮಿತ್ ಚಾವ್ಡಾ ಆಗ್ರಹಿಸಿದ್ದಾರೆ.</p>.<p>‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಚುನಾವಣೆ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಅಮಿತ್ ತಿಳಿಸಿದ್ದಾರೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲಿದ್ದೇನೆ ಎಂದೂ ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/gujarat-local-body-election-results-2021-bjp-leading-counting-of-votes-for-polls-to-81-809855.html" itemprop="url">ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿ ಹಿಡಿತದಲ್ಲಿ ಪಂಚಾಯಿತಿಗಳು!</a></p>.<p>ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಎಲ್ಲ 31 ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಜಯ ಗಳಿಸಿದೆ. 81 ಪಾಲಿಕೆಗಳ ಪೈಕಿ 70ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 231 ತಾಲ್ಲೂಕು ಪಂಚಾಯಿತಿಗಳಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ಗಿಂತ ಮುನ್ನಡೆ ಸಾಧಿಸಿದೆ.</p>.<p>ಈವರೆಗೆ ಫಲಿತಾಂಶ ಘೋಷಣೆಯಾದ 8,474 ಸ್ಥಾನಗಳ ಪೈಕಿ ಬಿಜೆಪಿ 6,110ರಲ್ಲಿ ಜಯ ಗಳಿಸಿದೆ.</p>.<p>ಕಾಂಗ್ರೆಸ್ ಕೇವಲ 1,768ರಲ್ಲಿ ಗೆದ್ದಿದ್ದು, ಕೇವಲ 3 ಪಾಲಿಕೆಗಳಲ್ಲಿ ಗೆಲುವು ಸಾಧಿಸಿದೆ. ಜಿಲ್ಲಾ ಪಂಚಾಯಿತಿಗಳಲ್ಲಿ ಖಾತೆ ತೆರೆಯುವುದೇ ಪಕ್ಷಕ್ಕೆ ಸಾಧ್ಯವಾಗಿಲ್ಲ. ಕೆಲವೇ ತಾಲ್ಲೂಕು ಪಂಚಾಯಿತಿಗಳಲ್ಲಿ ಜಯ ಗಳಿಸುವುದಷ್ಟೇ ಪಕ್ಷಕ್ಕೆ ಸಾಧ್ಯವಾಗಿದೆ.</p>.<p><strong>ಓದಿ:</strong><a href="https://www.prajavani.net/india-news/unemployment-high-in-india-due-to-governments-ill-considered-demonetisation-decision-says-manmohan-809868.html" itemprop="url">ನೋಟು ಅಮಾನ್ಯೀಕರಣದಿಂದ ಅನೌಪಚಾರಿಕ ವಲಯಕ್ಕೆ ಸಂಕಷ್ಟ: ಮನಮೋಹನ್ ಸಿಂಗ್</a></p>.<p>‘ಚುನಾವಣೆ ಫಲಿತಾಂಶವು ನಮ್ಮ ನಿರೀಕ್ಷೆಗಿಂತ ಸಂಪೂರ್ಣ ಭಿನ್ನವಾಗಿದೆ. ಪ್ರಚಾರದ ವೇಳೆ ಜನರಿಂದ ಉತ್ತಮ ಸ್ಪಂದನೆ ದೊರೆತಿತ್ತು. ಆದರೆ ಫಲಿತಾಂಶದಲ್ಲಿ ಅದು ಕಾಣಿಸುತ್ತಿಲ್ಲ. ಜನರು ಇವಿಎಂ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಚಾರಗಳೂ ತನಿಖೆಯಾಗಲಿ’ ಎಂದು ಅಮಿತ್ ಹೇಳಿದ್ದಾರೆ.</p>.<p>ಇಬ್ಬರು ನಾಯರು ರಾಜೀನಾಮೆ ನೀಡಿರುವುದು ನಿಜ. ಆ ಬಗ್ಗೆ ಪಕ್ಷದ ಉನ್ನತ ನಾಯಕತ್ವ ಮುಂದಿನ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>