ಸೆಷನ್ಸ್ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಟ್ವೀಟ್ ಮಾಡಿರುವ ಮೇವಾನಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ವಿಮರ್ಶೆ, ಚರ್ಚೆ ಮತ್ತು ವಾದಮಂಡನೆಗೆ ಇರುವ ಅವಕಾಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ ಮತ್ತು ನಮ್ಮ ಮೇಲೆ ದಾಖಲಿಸಲಾಗಿದ್ದ ಪ್ರಕರಣವನ್ನು ಆಧಾರರಹಿತ ಎಂದು ಹೇಳಿದೆ’ ಎಂದಿದ್ದಾರೆ.
ಮೇವಾನಿ ನೇತೃತ್ವದ ‘ರಾಷ್ಟ್ರೀಯ ದಲಿತ್ ಅಧಿಕಾರ ಮಂಚ’ ಎಂಬ ಹೆಸರಿನ ಸಂಘಟನೆಯು 2017ರ ಜುಲೈ 12ರಂದು ‘ಆಜದಿ ಕೂಚ್’ ಎಂಬ ರ್ಯಾಲಿ ಕೈಗೊಂಡಿತ್ತು. ಈ ರ್ಯಾಲಿಗೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಆಯೋಜಕರು ಈ ರ್ಯಾಲಿ ನಡೆಸಿದ್ದರು. ಈ ಕಾರಣಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ಅಡಿ (ಕಾನೂನು ಬಾಹಿರವಾಗಿ ಗುಂಪು ಸೇರುವಿಕೆ) 10 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.