ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಮತದಾನ ಹತ್ತಿರವಾಗುತ್ತಿದ್ದಂತೆಯೇ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಮುಖಂಡ ಅಮಿತ್ ಶಾ ಅವರು ಕಾಂಗ್ರೆಸ್ ಮೇಲೆ ಶುಕ್ರವಾರ ಹರಿಹಾಯ್ದಿದ್ದಾರೆ. ಹಿಂಸೆಯಲ್ಲಿ ತೊಡಗಿದ್ದವರಿಗೆ ಕಾಂಗ್ರೆಸ್ ಪಕ್ಷವು ಆಶ್ರಯ ಕೊಟ್ಟಿದೆ. ಆದರೆ, 2002ರಲ್ಲಿ ಇಂತಹ ಶಕ್ತಿಗಳಿಗೆ ತಕ್ಕ ಪಾಠ ಕಲಿಸಲಾಯಿತು. ಹೀಗಾಗಿಯೇ, ಆ ಬಳಿಕ ಅಂತಹ ಘಟನೆಗಳು ನಡೆಯಲಿಲ್ಲ ಎಂದು ಶಾ ಅವರು ಹೇಳಿದ್ದಾರೆ.