ವಟಮನ್–ಭಾವನಗರ ಸಂಪರ್ಕಿಸುವ ರಸ್ತೆಯಲ್ಲಿ ಬೆಳಗಿನ ಜಾವ 5 ಗಂಟೆಗೆ ಈ ಅಪಘಾತ ಸಂಭವಿಸಿದೆ.
‘8 ಮಂದಿ ಆನಂದ್ ಜಿಲ್ಲೆಯ ಖಾಂಬಟ್ನಿಂದ ವ್ಯಾನ್ನಲ್ಲಿ ತೆರಳುತ್ತಿದ್ದರು. ವಲಾನಾ ಹಳ್ಳಿಯ ಬಳಿ ಅಚಾನಕ್ಕಾಗಿ ವ್ಯಾನ್ ಪಕ್ಕಕ್ಕೆ ಚಲಿಸಿದ್ದು, ಈ ಸಂದರ್ಭ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ’ ಎಂದು ಕೋಥ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.