<p><strong>ಅಹಮದಾಬಾದ್</strong>: ಕೋವಿಡ್–19 ರೋಗದಿಂದ ಕನಿಷ್ಠ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ₹2000 ಸಹಾಯಧನವನ್ನು ನೀಡುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ.</p>.<p>ಈಗಾಗಲೇ ಕೋವಿಡ್ನಿಂದಾಗಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪ್ರತಿ ತಿಂಗಳು ₹4000 ರೂಪಾಯಿ ಸಹಾಯಧನವನ್ನು 18 ವರ್ಷದವರೆಗೆ ಒದಗಿಸುವ ‘ಮುಖ್ಯಮಂತ್ರಿ ಬಾಲ ಸೇವಾ ಯೋಜನೆ‘ಗೆ ಪೂರಕವಾಗಿ ಈ ಯೋಜನೆ ಘೋಷಿಸಲಾಗಿದೆ. ₹2000 ಸಹಾಯಧನ ಕೂಡ ಅರ್ಹ ಮಕ್ಕಳಿಗೆ 18 ವರ್ಷದವರೆಗೆ ನೀಡಲಾಗುತ್ತದೆ.</p>.<p>ಈ ವಿಷಯವಾಗಿ ಗುಜರಾತ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುನೈನಾ ತೋಮರ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಪತ್ರವನ್ನು ಹೊರಡಿಸಿದ್ದು, ಸಂತ್ರಸ್ತ ಮಕ್ಕಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಈ ಯೋಜನೆಯ ಪ್ರಕಾರ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಆಗಲಿದೆ.</p>.<p>ಆಗಸ್ಟ್ 2 ರಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ ಚಾಲನೆ ನೀಡಲಿದ್ದಾರೆ.ಗುಜರಾತ್ನಲ್ಲಿ ಇದುವರೆಗೆ 726 ಮಕ್ಕಳು ತಮ್ಮ ತಂದೆ ಮತ್ತು ತಾಯಿಯನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಕೋವಿಡ್–19 ರೋಗದಿಂದ ಕನಿಷ್ಠ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ₹2000 ಸಹಾಯಧನವನ್ನು ನೀಡುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ.</p>.<p>ಈಗಾಗಲೇ ಕೋವಿಡ್ನಿಂದಾಗಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪ್ರತಿ ತಿಂಗಳು ₹4000 ರೂಪಾಯಿ ಸಹಾಯಧನವನ್ನು 18 ವರ್ಷದವರೆಗೆ ಒದಗಿಸುವ ‘ಮುಖ್ಯಮಂತ್ರಿ ಬಾಲ ಸೇವಾ ಯೋಜನೆ‘ಗೆ ಪೂರಕವಾಗಿ ಈ ಯೋಜನೆ ಘೋಷಿಸಲಾಗಿದೆ. ₹2000 ಸಹಾಯಧನ ಕೂಡ ಅರ್ಹ ಮಕ್ಕಳಿಗೆ 18 ವರ್ಷದವರೆಗೆ ನೀಡಲಾಗುತ್ತದೆ.</p>.<p>ಈ ವಿಷಯವಾಗಿ ಗುಜರಾತ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುನೈನಾ ತೋಮರ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಪತ್ರವನ್ನು ಹೊರಡಿಸಿದ್ದು, ಸಂತ್ರಸ್ತ ಮಕ್ಕಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಈ ಯೋಜನೆಯ ಪ್ರಕಾರ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಆಗಲಿದೆ.</p>.<p>ಆಗಸ್ಟ್ 2 ರಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ ಚಾಲನೆ ನೀಡಲಿದ್ದಾರೆ.ಗುಜರಾತ್ನಲ್ಲಿ ಇದುವರೆಗೆ 726 ಮಕ್ಕಳು ತಮ್ಮ ತಂದೆ ಮತ್ತು ತಾಯಿಯನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>