<p class="bodytext"><strong>ಅಹಮದಾಬಾದ್ (ಪಿಟಿಐ): </strong>ಮಾದಕ ವಸ್ತುವಿಗೆ ಸಂಬಂಧಿಸಿ ಎನ್ಡಿಪಿಎಸ್ ಕಾಯ್ದೆಯಡಿ 1996ರಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಆರೋಪಗಳನ್ನು ಮಾರ್ಪಡಿಸುವಂತೆ ಕೋರಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p class="bodytext">ನ್ಯಾಯಾಧೀಶ ಇಲೇಶ್ ವೋರಾ ಅವರು, ಭಟ್ ಅವರ ಅರ್ಜಿ ವಜಾಗೊಳಿಸಿದರಲ್ಲದೇ, ವಿಚಾರಣೆಯನ್ನು ತ್ವರಿತಗತಿಯಲ್ಲಿ ಆರಂಭಿಸಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದರು.</p>.<p>ಭಟ್ ಅವರು, ಕೆಳ ನ್ಯಾಯಾಲಯಗಳಲ್ಲಿ ಮತ್ತು ಹೈಕೋರ್ಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದು, ವಿಚಾರಣೆ ಪ್ರಕ್ರಿಯೆಯು ಇನ್ನಷ್ಟೇ ಆರಂಭವಾಗಬೇಕಿದೆ.</p>.<p>ಗುಜರಾತ್ ಕೇಡರ್ನ ಅಧಿಕಾರಿಯಾದ ಸಂಜೀವ್ ಭಟ್ ಅವರನ್ನು 2018ರಲ್ಲಿ ಸಿಐಡಿ ಬಂಧಿಸಿದ್ದು, ಅವರು ಜೈಲಿನಲ್ಲಿದ್ದಾರೆ.</p>.<p>1996ರಲ್ಲಿ ಗುಜರಾತ್ನ ಬನಾಸಕಾಂಠಾ ಜಿಲ್ಲೆಯಲ್ಲಿ ಮಾದಕ ವಸ್ತು ಹೊಂದಿದ ಸುಳ್ಳು ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿದ ಪ್ರಕರಣ ಇದು. ಘಟನೆ ನಡೆದ ಸಂದರ್ಭದಲ್ಲಿ ಸಂಜೀವ್ ಭಟ್ ಬನಾಸಕಾಂಠಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ಪ್ರಕರಣದ ವಿಚಾರಣೆಯನ್ನು ಬನಾಸಕಾಂಠಾ ವಿಚಾರಣಾ ನ್ಯಾಯಾಲಯ ನಡೆಸುತ್ತಿದೆ. ಇದಕ್ಕೂ ಮೊದಲು 1990ರಲ್ಲಿ ಕಸ್ಟಡಿಯಲ್ಲಿದ್ದ ವ್ಯಕ್ತಿಯ ಸಾವಿನ ಪ್ರಕರಣ ಸಂಬಂಧ ಇವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕೆಲಸಕ್ಕೆ ಅನಧಿಕೃತ ಗೈರು ಹಾಜರಾದ ಕಾರಣ ನೀಡಿ ಭಟ್ ಅವರನ್ನು 2015ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಅಹಮದಾಬಾದ್ (ಪಿಟಿಐ): </strong>ಮಾದಕ ವಸ್ತುವಿಗೆ ಸಂಬಂಧಿಸಿ ಎನ್ಡಿಪಿಎಸ್ ಕಾಯ್ದೆಯಡಿ 1996ರಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಆರೋಪಗಳನ್ನು ಮಾರ್ಪಡಿಸುವಂತೆ ಕೋರಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p class="bodytext">ನ್ಯಾಯಾಧೀಶ ಇಲೇಶ್ ವೋರಾ ಅವರು, ಭಟ್ ಅವರ ಅರ್ಜಿ ವಜಾಗೊಳಿಸಿದರಲ್ಲದೇ, ವಿಚಾರಣೆಯನ್ನು ತ್ವರಿತಗತಿಯಲ್ಲಿ ಆರಂಭಿಸಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದರು.</p>.<p>ಭಟ್ ಅವರು, ಕೆಳ ನ್ಯಾಯಾಲಯಗಳಲ್ಲಿ ಮತ್ತು ಹೈಕೋರ್ಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದು, ವಿಚಾರಣೆ ಪ್ರಕ್ರಿಯೆಯು ಇನ್ನಷ್ಟೇ ಆರಂಭವಾಗಬೇಕಿದೆ.</p>.<p>ಗುಜರಾತ್ ಕೇಡರ್ನ ಅಧಿಕಾರಿಯಾದ ಸಂಜೀವ್ ಭಟ್ ಅವರನ್ನು 2018ರಲ್ಲಿ ಸಿಐಡಿ ಬಂಧಿಸಿದ್ದು, ಅವರು ಜೈಲಿನಲ್ಲಿದ್ದಾರೆ.</p>.<p>1996ರಲ್ಲಿ ಗುಜರಾತ್ನ ಬನಾಸಕಾಂಠಾ ಜಿಲ್ಲೆಯಲ್ಲಿ ಮಾದಕ ವಸ್ತು ಹೊಂದಿದ ಸುಳ್ಳು ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿದ ಪ್ರಕರಣ ಇದು. ಘಟನೆ ನಡೆದ ಸಂದರ್ಭದಲ್ಲಿ ಸಂಜೀವ್ ಭಟ್ ಬನಾಸಕಾಂಠಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಈ ಪ್ರಕರಣದ ವಿಚಾರಣೆಯನ್ನು ಬನಾಸಕಾಂಠಾ ವಿಚಾರಣಾ ನ್ಯಾಯಾಲಯ ನಡೆಸುತ್ತಿದೆ. ಇದಕ್ಕೂ ಮೊದಲು 1990ರಲ್ಲಿ ಕಸ್ಟಡಿಯಲ್ಲಿದ್ದ ವ್ಯಕ್ತಿಯ ಸಾವಿನ ಪ್ರಕರಣ ಸಂಬಂಧ ಇವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕೆಲಸಕ್ಕೆ ಅನಧಿಕೃತ ಗೈರು ಹಾಜರಾದ ಕಾರಣ ನೀಡಿ ಭಟ್ ಅವರನ್ನು 2015ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>