ನವಸಾರಿ: ಗುಜರಾತ್ನ ನವಸಾರಿ ಜಿಲ್ಲೆಯ ವೆಸ್ಮಾ ಗ್ರಾಮದ ಬಳಿಯ ಮುಂಬೈ–ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್ಯುವಿ ಕಾರೊಂದು ಐಷಾರಾಮಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 29 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲ್ಸಾದ್ ಕಡೆಗೆ ತೆರಳುತ್ತಿದ್ದ ಬಸ್ಗೆ ಶನಿವಾರ ಬೆಳಗಿನ ಜಾವ 3.20ರ ಸುಮಾರಿಗೆ ಎದುರಿನಿಂದ ಬರುತ್ತಿದ್ದ ಎಸ್ಯುವಿ ಕಾರು ರಸ್ತೆ ವಿಭಜಕವನ್ನು ದಾಟಿ ಬಂದು ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.
ಎಸ್ಯುವಿ ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಎಂಟು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್ ಪ್ರಯಾಣಿಕರೊಬ್ಬರು ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ₹2ಲಕ್ಷ ಹಾಗೂ ಗಾಯಗೊಂಡವರಿಗೆ ₹50ಸಾವಿರ ಪರಿಹಾರ ಘೋಷಿಸಿದ್ದಾರೆ.