<p><strong>ಅಹಮದಾಬಾದ್</strong>: ಗುಜರಾತಿನ ಗಾಂಧಿನಗರ ಜಿಲ್ಲೆಯ ಪಾರ್ಸಾ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ದಲಿತ ವರ, ಕುದುರೆ ಸವಾರಿ ಮಾಡುವುದನ್ನು ನಿಲ್ಲಿಸಿದ್ದ ಒಂಬತ್ತು ಆರೋಪಿಗಳಿಗೆ ಇಲ್ಲಿನ ಸೆಷೆನ್ಸ್ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.</p>.<p>2018ರಲ್ಲಿ ಈ ಘಟನೆ ನಡೆದಿದ್ದು, ದರ್ಬಾರ್ ಸಮುದಾಯಕ್ಕೆ ಸೇರಿದ ಆರೋಪಿಗಳು, ಮದುವೆ ಮೆರವಣಿಗೆ ಪೂರ್ಣಗೊಳಿಸಲು ದಲಿತ ವರನಿಗೆ ಪೊಲೀಸರ ರಕ್ಷಣೆ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದರು.</p>.<p>ಸೆಷೆನ್ಸ್ ನ್ಯಾಯಾಧೀಶರಾದ ಎಸ್.ಎನ್. ಸೋಂಲಕಿ ಅವರು, ಕ್ರಿಮಿನಲ್ ಬೆದರಿಕೆ, ಅಸಹನೆ, ಕಾನೂನುಬಾಹಿರ ಸಭೆ ಮತ್ತು ದೌರ್ಜನ್ಯ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ 9 ಆರೋಪಿಗಳನ್ನು ತಪ್ಪಿತಸ್ಥರು ಎಂದು ಪರಿಗಣಿಸಿ, 5 ವರ್ಷಗಳ ಜೈಲುಶಿಕ್ಷೆಯ ಜತೆಗೆ ₹ 10 ಸಾವಿರ ದಂಡವನ್ನೂ ವಿಧಿಸಿದ್ದಾರೆ.</p>.<p>ಶಿಕ್ಷೆ ಪ್ರಕಟಿಸಿರುವುದನ್ನು ದೃಢಪಡಿಸಿರುವ ಸಾರ್ವಜನಿಕ ಅಭಿಯೋಜಕರಾದ ಪಿ.ಡಿ. ವ್ಯಾಸ್ ಅವರು, ತೀರ್ಪಿನ ಪ್ರತಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.</p>.<p><strong>ಏನಿದು ಘಟನೆ?</strong></p>.<p>2018ರ ಜೂನ್ 17ರಂದು ಪಾರ್ಸಾ ಗ್ರಾಮದಲ್ಲಿ ಪ್ರಶಾಂತಿ ಸೋಲಂಕಿ ಎನ್ನುವವರು ತಮ್ಮ ಮದುವೆ ನಿಮಿತ್ತ ಸ್ಥಳೀಯವಾಗಿ ‘ವರ್ಗೋಡೋ’ ಎಂದು ಕರೆಯಲಾಗುವ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದರು. ವಧುವಿನ ಮನೆಗೆ ಹೋಗುವ ಮಾರ್ಗಮಧ್ಯೆ ದರ್ಬಾರ್ ಸಮುದಾಯದ ಜನರ ಗುಂಪೊಂದು ಈ ಮೆರವಣಿಗೆಯನ್ನು ನಿಲ್ಲಿಸಿ. ದರ್ಬಾರ್ ಸಮುದಾಯದಂಥ ಧೈರ್ಯಶಾಲಿ ಜಾತಿಯ ಜನರು ಮಾತ್ರ ಕುದುರೆ ಸವಾರಿ ಮಾಡಬಹುದು ಎಂದು ವರನಿಗೆ ತಿಳಿಸಿತ್ತು.</p>.<p>ನಂತರ ಪೊಲೀಸರ ರಕ್ಷಣೆಯಲ್ಲಿ ಮೆರವಣಿಗೆ ಪೂರ್ಣಗೊಂಡಿತ್ತು. ಈ ಸಂಬಂಧ ದರ್ಬಾರ್ ಸಮುದಾಯದ ಒಂಬತ್ತು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಗುಜರಾತಿನ ಗಾಂಧಿನಗರ ಜಿಲ್ಲೆಯ ಪಾರ್ಸಾ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ದಲಿತ ವರ, ಕುದುರೆ ಸವಾರಿ ಮಾಡುವುದನ್ನು ನಿಲ್ಲಿಸಿದ್ದ ಒಂಬತ್ತು ಆರೋಪಿಗಳಿಗೆ ಇಲ್ಲಿನ ಸೆಷೆನ್ಸ್ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.</p>.<p>2018ರಲ್ಲಿ ಈ ಘಟನೆ ನಡೆದಿದ್ದು, ದರ್ಬಾರ್ ಸಮುದಾಯಕ್ಕೆ ಸೇರಿದ ಆರೋಪಿಗಳು, ಮದುವೆ ಮೆರವಣಿಗೆ ಪೂರ್ಣಗೊಳಿಸಲು ದಲಿತ ವರನಿಗೆ ಪೊಲೀಸರ ರಕ್ಷಣೆ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದರು.</p>.<p>ಸೆಷೆನ್ಸ್ ನ್ಯಾಯಾಧೀಶರಾದ ಎಸ್.ಎನ್. ಸೋಂಲಕಿ ಅವರು, ಕ್ರಿಮಿನಲ್ ಬೆದರಿಕೆ, ಅಸಹನೆ, ಕಾನೂನುಬಾಹಿರ ಸಭೆ ಮತ್ತು ದೌರ್ಜನ್ಯ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ 9 ಆರೋಪಿಗಳನ್ನು ತಪ್ಪಿತಸ್ಥರು ಎಂದು ಪರಿಗಣಿಸಿ, 5 ವರ್ಷಗಳ ಜೈಲುಶಿಕ್ಷೆಯ ಜತೆಗೆ ₹ 10 ಸಾವಿರ ದಂಡವನ್ನೂ ವಿಧಿಸಿದ್ದಾರೆ.</p>.<p>ಶಿಕ್ಷೆ ಪ್ರಕಟಿಸಿರುವುದನ್ನು ದೃಢಪಡಿಸಿರುವ ಸಾರ್ವಜನಿಕ ಅಭಿಯೋಜಕರಾದ ಪಿ.ಡಿ. ವ್ಯಾಸ್ ಅವರು, ತೀರ್ಪಿನ ಪ್ರತಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.</p>.<p><strong>ಏನಿದು ಘಟನೆ?</strong></p>.<p>2018ರ ಜೂನ್ 17ರಂದು ಪಾರ್ಸಾ ಗ್ರಾಮದಲ್ಲಿ ಪ್ರಶಾಂತಿ ಸೋಲಂಕಿ ಎನ್ನುವವರು ತಮ್ಮ ಮದುವೆ ನಿಮಿತ್ತ ಸ್ಥಳೀಯವಾಗಿ ‘ವರ್ಗೋಡೋ’ ಎಂದು ಕರೆಯಲಾಗುವ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದರು. ವಧುವಿನ ಮನೆಗೆ ಹೋಗುವ ಮಾರ್ಗಮಧ್ಯೆ ದರ್ಬಾರ್ ಸಮುದಾಯದ ಜನರ ಗುಂಪೊಂದು ಈ ಮೆರವಣಿಗೆಯನ್ನು ನಿಲ್ಲಿಸಿ. ದರ್ಬಾರ್ ಸಮುದಾಯದಂಥ ಧೈರ್ಯಶಾಲಿ ಜಾತಿಯ ಜನರು ಮಾತ್ರ ಕುದುರೆ ಸವಾರಿ ಮಾಡಬಹುದು ಎಂದು ವರನಿಗೆ ತಿಳಿಸಿತ್ತು.</p>.<p>ನಂತರ ಪೊಲೀಸರ ರಕ್ಷಣೆಯಲ್ಲಿ ಮೆರವಣಿಗೆ ಪೂರ್ಣಗೊಂಡಿತ್ತು. ಈ ಸಂಬಂಧ ದರ್ಬಾರ್ ಸಮುದಾಯದ ಒಂಬತ್ತು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>