1996ರಲ್ಲಿ ಗುಜರಾತ್ನ ಬನಾಸಕಾಂಠಾ ಜಿಲ್ಲೆಯಲ್ಲಿ ಮಾದಕ ವಸ್ತು ಹೊಂದಿದ ಸುಳ್ಳು ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿದ ಪ್ರಕರಣ ಸಂಬಂಧಿಸಿ ಸಂಜೀವ್ ಭಟ್ 2018ರಿಂದ ಪಲನ್ಪುರ್ ಜೈಲಿನಲ್ಲಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಸಂಜೀವ್ ಭಟ್ ಬನಾಸಕಾಂಠಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಇದಕ್ಕೂ ಮೊದಲು 1990ರಲ್ಲಿ ಕಸ್ಟಡಿಯಲ್ಲಿದ್ದ ವ್ಯಕ್ತಿಯ ಸಾವಿನ ಪ್ರಕರಣ ಸಂಬಂಧ ಇವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.