<p class="title"><strong>ಅಹಮದಾಬಾದ್:</strong>ಗುಜರಾತ್ ಮುಖ್ಯಮಂತ್ರಿ ಹುದ್ದೆಯ ಎಎಪಿ ಅಭ್ಯರ್ಥಿ ಈಸುದಾನ್ ಗಢವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಕಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.</p>.<p class="title">‘ರೈತರು, ನಿರುದ್ಯೋಗಿ ಯುವಜನರು, ಮಹಿಳೆಯರು ಉದ್ಯಮಿಗಳ ಪರವಾಗಿ ಇಷ್ಟು ವರ್ಷ ಧ್ವನಿ ಎತ್ತುತ್ತಿದ್ದ ಈಸುದಾನ್ ಗಢವಿ ಅವರು ಕಂಭಾಲಿಯಾದಿಂದ ಸ್ಪರ್ಧಿಸಲಿದ್ದಾರೆ. ಕೃಷ್ಣನ ಪವಿತ್ರ ನಾಡಿಗೆ ಹೊಸ ಮತ್ತು ಉತ್ತಮವಾದ ಮುಖ್ಯಮಂತ್ರಿ ದೊರೆಯಲಿದ್ದಾರೆ’ ಎಂದು ಕೇಜ್ರಿವಾಲ್ ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p class="title">ಈ ಟ್ವೀಟ್ಗೆ ಗಢವಿ ಅವರು ನೀಡಿದ ಪ್ರತಿಕ್ರಿಯೆ ಹೀಗಿದೆ: ‘ನೀವು ಮತ್ತು ಗುಜರಾತ್ನ ಜನರು ಇಟ್ಟಿರುವ ವಿಶ್ವಾಸದಿಂದಾಗಿ ಕೊನೆಯುಸಿರಿನ ತನಕ ಗುಜರಾತ್ ಜನರ ಸೇವೆ ಮಾಡುತ್ತೇನೆ’. ಸುದ್ದಿವಾಹಿನಿಯಲ್ಲಿ ನಿರೂಪಕರಾಗಿದ್ದ ಗಢವಿ ಅವರನ್ನು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ನ. 4ರಂದು ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಹಮದಾಬಾದ್:</strong>ಗುಜರಾತ್ ಮುಖ್ಯಮಂತ್ರಿ ಹುದ್ದೆಯ ಎಎಪಿ ಅಭ್ಯರ್ಥಿ ಈಸುದಾನ್ ಗಢವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಕಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.</p>.<p class="title">‘ರೈತರು, ನಿರುದ್ಯೋಗಿ ಯುವಜನರು, ಮಹಿಳೆಯರು ಉದ್ಯಮಿಗಳ ಪರವಾಗಿ ಇಷ್ಟು ವರ್ಷ ಧ್ವನಿ ಎತ್ತುತ್ತಿದ್ದ ಈಸುದಾನ್ ಗಢವಿ ಅವರು ಕಂಭಾಲಿಯಾದಿಂದ ಸ್ಪರ್ಧಿಸಲಿದ್ದಾರೆ. ಕೃಷ್ಣನ ಪವಿತ್ರ ನಾಡಿಗೆ ಹೊಸ ಮತ್ತು ಉತ್ತಮವಾದ ಮುಖ್ಯಮಂತ್ರಿ ದೊರೆಯಲಿದ್ದಾರೆ’ ಎಂದು ಕೇಜ್ರಿವಾಲ್ ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p class="title">ಈ ಟ್ವೀಟ್ಗೆ ಗಢವಿ ಅವರು ನೀಡಿದ ಪ್ರತಿಕ್ರಿಯೆ ಹೀಗಿದೆ: ‘ನೀವು ಮತ್ತು ಗುಜರಾತ್ನ ಜನರು ಇಟ್ಟಿರುವ ವಿಶ್ವಾಸದಿಂದಾಗಿ ಕೊನೆಯುಸಿರಿನ ತನಕ ಗುಜರಾತ್ ಜನರ ಸೇವೆ ಮಾಡುತ್ತೇನೆ’. ಸುದ್ದಿವಾಹಿನಿಯಲ್ಲಿ ನಿರೂಪಕರಾಗಿದ್ದ ಗಢವಿ ಅವರನ್ನು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ನ. 4ರಂದು ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>