<p><strong>ಅಹಮದಾಬಾದ್:</strong>ಅಶಿಸ್ತಿನ ವರ್ತನೆಗೆ ಸಂಬಂಧಿಸಿದಂತೆ ಏಳು ನಾಯಕರನ್ನು ಗುಜರಾತ್ನ ಬಿಜೆಪಿ ಅಮಾನತುಗೊಳಿಸಿದೆ.</p>.<p>ಗುಜರಾತ್ ವಿಧಾನಸಭೆ ಚುನಾವಣೆಗೆ ಕೇವಲ ಎರಡು ವಾರಗಳಿರುವಂತೆಯೇ ಈ ಬೆಳವಣಿಗೆ ನಡೆದಿದೆ.</p>.<p>ಇಬ್ಬರು ಮಾಜಿ ಶಾಸಕರು ಸೇರಿದಂತೆ ಏಳು ಮಂದಿ ನಾಯಕರು ಪಕ್ಷದ ಸೂಚನೆಯನ್ನು ಉಲ್ಲಂಘಿಸಿ ಡಿಸೆಂಬರ್ 1ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/bharat-jodo-yatra-revolutionary-moment-for-national-politics-not-event-jairam-ramesh-990159.html" itemprop="url">ಭಾರತ್ ಜೋಡೊ ರಾಷ್ಟ್ರ ರಾಜಕಾರಣಕ್ಕೆ ‘ಕ್ರಾಂತಿಕಾರಿ ಕ್ಷಣ’ : ಜೈರಾಮ್ ರಮೇಶ್ </a></p>.<p>ಬಂಡಾಯವೆದ್ದ ನಾಯಕರಲ್ಲಿ ಹರ್ಷದ್ ವಾಸವ, ಅರವಿಂದ ಲಡಾನಿ, ಛತ್ರಸಿನ್ಹ ಗುಂಜಾರ, ಕೇತನ್, ಭರತ್ ಚಾವ್ಡಾ, ಉದಯ್ ಶಾ ಮತ್ತು ಕರಣ್ ಭರಯ್ಯ ಸೇರಿದ್ದಾರೆ.</p>.<p>ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಸೂಚನೆ ಮೇರೆಗೆ ನಾಯಕರನ್ನು ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿಯಲ್ಲಿ ಅತೃಪ್ತ ನಾಯಕರಿಂದ ಅಸಮಾಧಾನ ಹೊಗೆಯಾಡುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong>ಅಶಿಸ್ತಿನ ವರ್ತನೆಗೆ ಸಂಬಂಧಿಸಿದಂತೆ ಏಳು ನಾಯಕರನ್ನು ಗುಜರಾತ್ನ ಬಿಜೆಪಿ ಅಮಾನತುಗೊಳಿಸಿದೆ.</p>.<p>ಗುಜರಾತ್ ವಿಧಾನಸಭೆ ಚುನಾವಣೆಗೆ ಕೇವಲ ಎರಡು ವಾರಗಳಿರುವಂತೆಯೇ ಈ ಬೆಳವಣಿಗೆ ನಡೆದಿದೆ.</p>.<p>ಇಬ್ಬರು ಮಾಜಿ ಶಾಸಕರು ಸೇರಿದಂತೆ ಏಳು ಮಂದಿ ನಾಯಕರು ಪಕ್ಷದ ಸೂಚನೆಯನ್ನು ಉಲ್ಲಂಘಿಸಿ ಡಿಸೆಂಬರ್ 1ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/bharat-jodo-yatra-revolutionary-moment-for-national-politics-not-event-jairam-ramesh-990159.html" itemprop="url">ಭಾರತ್ ಜೋಡೊ ರಾಷ್ಟ್ರ ರಾಜಕಾರಣಕ್ಕೆ ‘ಕ್ರಾಂತಿಕಾರಿ ಕ್ಷಣ’ : ಜೈರಾಮ್ ರಮೇಶ್ </a></p>.<p>ಬಂಡಾಯವೆದ್ದ ನಾಯಕರಲ್ಲಿ ಹರ್ಷದ್ ವಾಸವ, ಅರವಿಂದ ಲಡಾನಿ, ಛತ್ರಸಿನ್ಹ ಗುಂಜಾರ, ಕೇತನ್, ಭರತ್ ಚಾವ್ಡಾ, ಉದಯ್ ಶಾ ಮತ್ತು ಕರಣ್ ಭರಯ್ಯ ಸೇರಿದ್ದಾರೆ.</p>.<p>ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಸೂಚನೆ ಮೇರೆಗೆ ನಾಯಕರನ್ನು ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.</p>.<p>ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿಯಲ್ಲಿ ಅತೃಪ್ತ ನಾಯಕರಿಂದ ಅಸಮಾಧಾನ ಹೊಗೆಯಾಡುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>