ಅಹಮದಾಬಾದ್ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಸೋಮನಾಥ ದೇವಾಲಯದ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಮೋದಿಯವರು ಅಲ್ಲಿಗೆಭೇಟಿ ನೀಡುತ್ತಿರುವುದು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಅವರು ವೆರಾವಲ್, ಧೋರಾಜಿ, ಅಮ್ರೇಲಿ ಮತ್ತುಬೋಟಾಡ್ನಲ್ಲಿ ನಡೆಯಲಿರುವ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಏತನ್ಮಧ್ಯೆ, ನ.21 ರಂದು ಮೋದಿ ಅವರು ಸುರೇಂದ್ರನಗರ, ಭರೂಚ್ ಮತ್ತು ನವಸಾರಿಯಲ್ಲಿ ಮೂರು ರ್ಯಾಲಿಗಳನ್ನು ನಡೆಸಲಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೌರಾಷ್ಟ್ರದ ಕ್ಷೇತ್ರಗಳಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತಾದರೂ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಮತಗಳನ್ನು ಸೆಳೆಯುವಲ್ಲಿ ಹಿಂದೆ ಬಿದ್ದಿತ್ತು.
ನವಸಾರಿಗೆ ರಾಹುಲ್ ಭೇಟಿ?: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನ. 21 ರಂದು (ಸೋಮವಾರ) ನವಸಾರಿಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
I will be addressing campaign rallies in Veraval, Dhoraji, Amreli and Botad today. The support @BJP4Gujarat is getting from women and youngsters is outstanding.