ನವದೆಹಲಿ: ಗುಜರಾತ್ನ ಮೊರ್ಬಿ ಜಿಲ್ಲೆಯ ಕಾರ್ಖಾನೆಯೊಂದರ ಗೋಡೆ ಕುಸಿದು 12 ಕಾರ್ಮಿಕರು ಮೃತಪಟ್ಟ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಖೇದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಮೊರ್ಬಿಯಲ್ಲಿ ಗೋಡೆ ಕುಸಿದು ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಗುಜರಾತ್ನ ಮೊರ್ಬಿ ಜಿಲ್ಲೆಯ ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.