<p><strong>ಶ್ರೀನಗರ:</strong> ‘ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸದ ಹೊರತು ಕಣಿವೆಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಿಲ್ಲ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.</p>.<p>ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದಗುಪ್ಕಾರ್ ಕೂಟದ ಪಕ್ಷಗಳ ಸಭೆಯ ನಂತರ ಮಾಧ್ಯಮಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಮ್ಮಿಂದ ಕಿತ್ತುಕೊಂಡಿರುವ ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪಿಸುವಂತೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಒತ್ತಾಯಿಸುತ್ತೇನೆ’ ಎಂದು ಹೇಳಿದರು.</p>.<p>‘ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿದಂತೆ ಎಲ್ಲರೊಂದಿಗೂ ಮಾತುಕತೆ ನಡೆಸಬೇಕು. ಅವರು (ಭಾರತ) ದೋಹಾದ ತಾಲಿಬಾನ್ ಜೊತೆ ಮಾತನಾಡುತ್ತಿದ್ದಾರೆ. ಅದರಂತೆ ಕಾಶ್ಮೀರ ಸಮಸ್ಯೆಯ ಪರಿಹಾರಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಮತ್ತು ಪಾಕಿಸ್ತಾನದೊಂದಿಗೆ ಮಾತನಾಡಬೇಕು’ ಎಂದರು.</p>.<p>ಕೇಂದ್ರದೊಂದಿಗೆ ಮಾತುಕತೆಯನ್ನು ತಮ್ಮ ಪಕ್ಷ ಎಂದಿಗೂ ವಿರೋಧಿಸಿಲ್ಲ. ಕೋವಿಡ್ ಕಾರಣದಿಂದಾಗಿ ದೇಶದ ಇತರ ಭಾಗಗಳಲ್ಲಿ ಮಾಡಿರುವಂತೆ, ಕಾಶ್ಮೀರದಲ್ಲಿಯೂ ಕೈದಿಗಳನ್ನು ಬಿಡುಗಡೆ ಮಾಡಬೇಕು. ಜನರ ಆತ್ಮವಿಶ್ವಾಸ ಹೆಚ್ಚಿಸುವ ಇಂತಹ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಕಳೆದ ಎರಡು ವರ್ಷಗಳಲ್ಲಿ ತುಂಬಾ ಅವಮಾನಕ್ಕೊಳಗಾಗಿರುವ ರಾಜಕೀಯ ಪಕ್ಷಗಳು ಹಾಗೂ ಜನರ ವಿಶ್ವಾಸ ಗಳಿಸಬೇಕಾದರೆ, ಕೇಂದ್ರವು ರಾಜಕೀಯ ಕೈದಿಗಳು ಮತ್ತು ಇತರ ಬಂಧಿತರನ್ನು ಬಿಡುಗಡೆ ಮಾಡಬೇಕಾಗಿತ್ತು ಎಂದು ಮೆಹಬೂಬಾ ಹೇಳಿದರು.</p>.<p class="Briefhead"><strong>ಬಿಜೆಪಿ ಸ್ವಾಗತ</strong></p>.<p><strong>ಜಮ್ಮು: </strong>ಪ್ರಧಾನಿ ನೇತೃತ್ವದ ಸಭೆಯಲ್ಲಿ ಭಾಗವಹಿಸಲು ಗುಪ್ಕಾರ್ ಕೂಟ ತೆಗೆದುಕೊಂಡಿರುವ ನಿರ್ಧಾರವನ್ನು ಜಮ್ಮು ಕಾಶ್ಮೀರ ಬಿಜೆಪಿ ಘಟಕದ ಮುಖ್ಯಸ್ಥ ರವೀಂದರ್ ರೈನಾ ಸ್ವಾಗತಿಸಿದ್ದಾರೆ.</p>.<p>‘ನಾವೆಲ್ಲರೂ ರಾಷ್ಟ್ರದ ಹಿತದೃಷ್ಟಿಯಿಂದ ಒಂದಾಗಬೇಕು ಮತ್ತು ‘ಏಕ ಭಾರತ ಶ್ರೇಷ್ಠ ಭಾರತ’ಕ್ಕಾಗಿ ಕೆಲಸ ಮಾಡಬೇಕಿದೆ’ ಎಂದು ಅವರು ಹೇಳಿದ್ದಾರೆ.</p>.<p>ಸಮಸ್ಯೆಗಳನ್ನು ಬಗೆಹರಿಸುವ ಮತ್ತು ವಂಚಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಸದಾ ಚಿಂತಿಸುವ ಪ್ರಧಾನಿಯ ನಿಲುವನ್ನು ರೈನಾ ಶ್ಲಾಘಿಸಿದ್ದಾರೆ.</p>.<p>*******<br /><br />ಸಭೆಯ ಕಾರ್ಯಸೂಚಿ ಏನು ಎಂದು ಕೇಂದ್ರ ಸರ್ಕಾರ ತಿಳಿಸಿಲ್ಲ. ಹೀಗಾಗಿ ನಾವು ಯಾವ ವಿಷಯದ ಬಗ್ಗೆಯೂ ಮಾತನಾಡಬಹುದು</p>.<p><strong><span class="quote">- ಫಾರೂಕ್ ಅಬ್ದುಲ್ಲಾ, ಗುಪ್ಕಾರ್ ಮುಖ್ಯಸ್ಥ</span></strong></p>.<p><span class="quote">*******<br /><br />ನಾವು ನಕ್ಷತ್ರಗಳನ್ನು ಕೇಳುತ್ತಿಲ್ಲ. ನಮ್ಮದನ್ನು ನಾವು ಕೇಳುತ್ತಿದ್ದೇವೆ. ಪ್ರಸ್ತಾವ ಕಾಶ್ಮೀರದ ಜನರ ಹಿತಕ್ಕೆ ಅನುಗುಣವಾಗಿದ್ದರೆ, ಒಪ್ಪುತ್ತೇವೆ</span></p>.<p><strong><span class="quote">ಎಂ.ವೈ. ತಾರಿಗಾಮಿ, ಸಿಪಿಎಂ ಮುಖ್ಯಸ್ಥ</span></strong></p>.<p><span class="quote">*********<br />370ನೇ ವಿಧಿ ಮತ್ತು 35 ಎ ವಿಧಿಗಳನ್ನು ಮರುಸ್ಥಾಪಿಸಬೇಕು ಎಂಬ ನಮ್ಮ ಬೇಡಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ</span><br /><br /><span class="quote">-<strong> ಮುಜಪ್ಫರ್ ಶಾ, ಎಎನ್ಸಿ ಉಪಾಧ್ಯಕ್ಷ</strong></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸದ ಹೊರತು ಕಣಿವೆಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಿಲ್ಲ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.</p>.<p>ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದಗುಪ್ಕಾರ್ ಕೂಟದ ಪಕ್ಷಗಳ ಸಭೆಯ ನಂತರ ಮಾಧ್ಯಮಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಮ್ಮಿಂದ ಕಿತ್ತುಕೊಂಡಿರುವ ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪಿಸುವಂತೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಒತ್ತಾಯಿಸುತ್ತೇನೆ’ ಎಂದು ಹೇಳಿದರು.</p>.<p>‘ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿದಂತೆ ಎಲ್ಲರೊಂದಿಗೂ ಮಾತುಕತೆ ನಡೆಸಬೇಕು. ಅವರು (ಭಾರತ) ದೋಹಾದ ತಾಲಿಬಾನ್ ಜೊತೆ ಮಾತನಾಡುತ್ತಿದ್ದಾರೆ. ಅದರಂತೆ ಕಾಶ್ಮೀರ ಸಮಸ್ಯೆಯ ಪರಿಹಾರಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಮತ್ತು ಪಾಕಿಸ್ತಾನದೊಂದಿಗೆ ಮಾತನಾಡಬೇಕು’ ಎಂದರು.</p>.<p>ಕೇಂದ್ರದೊಂದಿಗೆ ಮಾತುಕತೆಯನ್ನು ತಮ್ಮ ಪಕ್ಷ ಎಂದಿಗೂ ವಿರೋಧಿಸಿಲ್ಲ. ಕೋವಿಡ್ ಕಾರಣದಿಂದಾಗಿ ದೇಶದ ಇತರ ಭಾಗಗಳಲ್ಲಿ ಮಾಡಿರುವಂತೆ, ಕಾಶ್ಮೀರದಲ್ಲಿಯೂ ಕೈದಿಗಳನ್ನು ಬಿಡುಗಡೆ ಮಾಡಬೇಕು. ಜನರ ಆತ್ಮವಿಶ್ವಾಸ ಹೆಚ್ಚಿಸುವ ಇಂತಹ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಕಳೆದ ಎರಡು ವರ್ಷಗಳಲ್ಲಿ ತುಂಬಾ ಅವಮಾನಕ್ಕೊಳಗಾಗಿರುವ ರಾಜಕೀಯ ಪಕ್ಷಗಳು ಹಾಗೂ ಜನರ ವಿಶ್ವಾಸ ಗಳಿಸಬೇಕಾದರೆ, ಕೇಂದ್ರವು ರಾಜಕೀಯ ಕೈದಿಗಳು ಮತ್ತು ಇತರ ಬಂಧಿತರನ್ನು ಬಿಡುಗಡೆ ಮಾಡಬೇಕಾಗಿತ್ತು ಎಂದು ಮೆಹಬೂಬಾ ಹೇಳಿದರು.</p>.<p class="Briefhead"><strong>ಬಿಜೆಪಿ ಸ್ವಾಗತ</strong></p>.<p><strong>ಜಮ್ಮು: </strong>ಪ್ರಧಾನಿ ನೇತೃತ್ವದ ಸಭೆಯಲ್ಲಿ ಭಾಗವಹಿಸಲು ಗುಪ್ಕಾರ್ ಕೂಟ ತೆಗೆದುಕೊಂಡಿರುವ ನಿರ್ಧಾರವನ್ನು ಜಮ್ಮು ಕಾಶ್ಮೀರ ಬಿಜೆಪಿ ಘಟಕದ ಮುಖ್ಯಸ್ಥ ರವೀಂದರ್ ರೈನಾ ಸ್ವಾಗತಿಸಿದ್ದಾರೆ.</p>.<p>‘ನಾವೆಲ್ಲರೂ ರಾಷ್ಟ್ರದ ಹಿತದೃಷ್ಟಿಯಿಂದ ಒಂದಾಗಬೇಕು ಮತ್ತು ‘ಏಕ ಭಾರತ ಶ್ರೇಷ್ಠ ಭಾರತ’ಕ್ಕಾಗಿ ಕೆಲಸ ಮಾಡಬೇಕಿದೆ’ ಎಂದು ಅವರು ಹೇಳಿದ್ದಾರೆ.</p>.<p>ಸಮಸ್ಯೆಗಳನ್ನು ಬಗೆಹರಿಸುವ ಮತ್ತು ವಂಚಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಸದಾ ಚಿಂತಿಸುವ ಪ್ರಧಾನಿಯ ನಿಲುವನ್ನು ರೈನಾ ಶ್ಲಾಘಿಸಿದ್ದಾರೆ.</p>.<p>*******<br /><br />ಸಭೆಯ ಕಾರ್ಯಸೂಚಿ ಏನು ಎಂದು ಕೇಂದ್ರ ಸರ್ಕಾರ ತಿಳಿಸಿಲ್ಲ. ಹೀಗಾಗಿ ನಾವು ಯಾವ ವಿಷಯದ ಬಗ್ಗೆಯೂ ಮಾತನಾಡಬಹುದು</p>.<p><strong><span class="quote">- ಫಾರೂಕ್ ಅಬ್ದುಲ್ಲಾ, ಗುಪ್ಕಾರ್ ಮುಖ್ಯಸ್ಥ</span></strong></p>.<p><span class="quote">*******<br /><br />ನಾವು ನಕ್ಷತ್ರಗಳನ್ನು ಕೇಳುತ್ತಿಲ್ಲ. ನಮ್ಮದನ್ನು ನಾವು ಕೇಳುತ್ತಿದ್ದೇವೆ. ಪ್ರಸ್ತಾವ ಕಾಶ್ಮೀರದ ಜನರ ಹಿತಕ್ಕೆ ಅನುಗುಣವಾಗಿದ್ದರೆ, ಒಪ್ಪುತ್ತೇವೆ</span></p>.<p><strong><span class="quote">ಎಂ.ವೈ. ತಾರಿಗಾಮಿ, ಸಿಪಿಎಂ ಮುಖ್ಯಸ್ಥ</span></strong></p>.<p><span class="quote">*********<br />370ನೇ ವಿಧಿ ಮತ್ತು 35 ಎ ವಿಧಿಗಳನ್ನು ಮರುಸ್ಥಾಪಿಸಬೇಕು ಎಂಬ ನಮ್ಮ ಬೇಡಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ</span><br /><br /><span class="quote">-<strong> ಮುಜಪ್ಫರ್ ಶಾ, ಎಎನ್ಸಿ ಉಪಾಧ್ಯಕ್ಷ</strong></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>