ಕೋಲ್ಕತ್ತ: ಗುವಾಹಟಿ – ಬಿಕನೇರ್ ನಡುವಿನ ಎಕ್ಸ್ಪ್ರೆಸ್ ರೈಲು (15633) ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯದೊಮೊಹಾನಿ ಬಳಿ ಹಳಿ ತಪ್ಪಿದೆ. ಘಟನೆಯಲ್ಲಿ ಐವರು ಸಾವಿಗೀಡಾಗಿದ್ದು, 45ಮಂದಿ ಗಾಯಗೊಂಡಿದ್ದಾರೆ ಎಂದು ಆರಂಭಿಕ ಮಾಹಿತಿಯಿಂದ ಗೊತ್ತಾಗಿದೆ.
ಇಂದು (ಜ. 13) ಸಂಜೆ ಐದು ಗಂಟೆಯಲ್ಲಿ ದುರ್ಘಟನೆ ಸಂಭವಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ರೈಲ್ವೆ ಇಲಾಖೆ, ‘ಸಂಜೆ ಐದು ಗಂಟೆಯಲ್ಲಿ ಅಪಘಾತ ಸಂಭವಿಸಿದೆ. 12 ಬೋಗಿಗಳು ಹಾನಿಗೀಡಾಗಿವೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ವೈದ್ಯಕೀಯ ತಂಡವನ್ನು ರವಾನಿಸಲಾಗಿದೆ’ಎಂದಿದೆ. ಈ ಸಂಬಂಧ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು ಬೋಗಿಗಳು ಉರುಳಿಬಿದ್ದವು. ಸಾವು ನೋವುಗಳು ಸಂಭವಿಸಿವೆ’ ಎಂದು ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರು ಹೇಳಿದ್ದಾರೆ.
ರೈಲು ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.
ಘಟನೆ ಬಗ್ಗೆ ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,‘ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂ, ಎಸ್ಪಿ, ಐಜಿರಕ್ಷಣೆ ಮತ್ತು ಪರಿಹಾರದಮೇಲ್ವಿಚಾರಣೆ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ₹5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹1 ಲಕ್ಷ, ಸಣ್ಣಪುಟ್ಟ ಗಾಯಗೊಂಡವರಿಗೆ ₹25 ಸಾವಿರಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಹೇಳಿದೆ.
ರೈಲ್ವೆ ಸಹಾಯವಾಣಿ ಸಂಖ್ಯೆಗಳು:03612731622, 03612731623
Guwahati-Bikaner Express 15633 (up) derailed at about 5 pm this evening. Details awaited pic.twitter.com/It93WwAsu8