’ಶೃಂಗಾರ ಗೌರಿ ಪೂಜೆಗೆ ಅವಕಾಶ ಕೋರಿ ಹಿಂದೂಗಳು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಅರ್ಹವಾಗಿದೆ’ ಎಂದು ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ. ವಿಶ್ವಾಸ್ ಹೇಳಿದ್ದಾರೆ. ಇದೇವೇಳೆ, ‘ಹಿಂದೂಗಳ ಅರ್ಜಿಗೆ ಪ್ರತಿಯಾಗಿ ಮುಸ್ಲಿಮರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿದೆ’ ಎಂದು ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.