<p><strong>ವಾರಾಣಸಿ:</strong> ಪಾಕಿಸ್ತಾನದ ನಂಬರ್ ಮೂಲಕ ಕರೆ ಮಾಡಿದ ಅಪರಿಚಿತರು ನಮ್ಮ ತಲೆ ಕಡಿಯುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಶೃಂಗಾರ ಗೌರಿ-ಜ್ಞಾನವಾಪಿ ಪ್ರಕರಣದಲ್ಲಿ ವಾದಿಯಾಗಿರುವ ಮಹಿಳೆಯ ಪತಿ ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>ಶೃಂಗಾರ ಗೌರಿ-ಜ್ಞಾನವಾಪಿ ಪ್ರಕರಣದ ವಿಚಾರಣೆಯು ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರದಿಂದ ಪುನರಾರಂಭವಾಗಲಿದ್ದು, ಅದೇ ಹೊತ್ತಲ್ಲೇ ಬೆದರಿಕೆ ಕರೆಯೂ ಬಂದಿದೆ.</p>.<p>‘ಸೋಹನ್ ಲಾಲ್ ಆರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ’ ಎಂದು ವಾರಾಣಸಿಯ ಲುಕ್ಸಾ ಠಾಣೆಯ ಠಾಣಾಧಿಕಾರಿ ಅನಿಲ್ ಸಾಹು ಹೇಳಿದ್ದಾರೆ.</p>.<p>ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಯ, ‘ಪಾಕಿಸ್ತಾನದ ಮೊಬೈಲ್ ಸಂಖ್ಯೆಯಿಂದ ಯಾರೋ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ರಾಜಸ್ತಾನದ ಉದಯಪುರದ ಕನ್ಹಯ್ಯಾ ಅವರಂತೆ ಕತ್ತು ಕುಯ್ದು ಕೊಲೆ ಮಾಡುವುದಾಗಿ ಕರೆ ಮಾಡಿದವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಪ್ರಕರಣವನ್ನು ಹಿಂಪಡೆಯಲು ನಮಗೆ ಒತ್ತಡ ಹೇರುತ್ತಿದ್ದಾರೆ. ಇಲ್ಲವಾದರೆ, ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ’ ಎಂದು ಅವರು ಹೇಳಿದರು.</p>.<p>ಮಾರ್ಚ್ 19 ರಂದು ಮತ್ತು ಜುಲೈ 20 ರಂದು ಪಾಕಿಸ್ತಾನದ ಸಂಖ್ಯೆಯಿಂದ ತಮಗೆ ಕರೆಗಳು ಬಂದಿರುವುದಾಗಿ ಆರ್ಯ ಹೇಳಿದ್ದಾರೆ.</p>.<p>‘ಇದಲ್ಲದೆ, ಆಗಸ್ಟ್ 3ರಂದೂ ಪಾಕಿಸ್ತಾನದ ನಂಬರ್ನಿಂದ ಮಿಸ್ಡ್ ಕಾಲ್ ಬಂದಿತ್ತು. ಬೆದರಿಕೆ ಕರೆಗಳು ಹೆಚ್ಚುತ್ತಿರುವುದರಿಂದ ವಿಷಯವನ್ನು ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಸೋಹನ್ ಲಾಲ್ ಆರ್ಯ ಅವರು ಲಕ್ಷ್ಮಿ ದೇವಿ ಎಂಬುವವರ ಪತಿ. 693/2021 ರಾಖಿ ಸಿಂಗ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಪ್ರಕರಣದ ಐವರು ವಾದಿಗಳಲ್ಲಿ ಲಕ್ಷ್ಮೀ ದೇವಿ ಅವರೂ ಒಬ್ಬರು. ಜ್ಞಾನವಾಪಿ ಆವರಣದೊಳಗೆ ಶೃಂಗಾರ ಗೌರಿ ಮತ್ತು ಇತರ ದೇವತೆಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಐವರೂ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಪ್ರಕರಣದ ವಿಚಾರಣೆ ಇಂದೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ:</strong> ಪಾಕಿಸ್ತಾನದ ನಂಬರ್ ಮೂಲಕ ಕರೆ ಮಾಡಿದ ಅಪರಿಚಿತರು ನಮ್ಮ ತಲೆ ಕಡಿಯುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಶೃಂಗಾರ ಗೌರಿ-ಜ್ಞಾನವಾಪಿ ಪ್ರಕರಣದಲ್ಲಿ ವಾದಿಯಾಗಿರುವ ಮಹಿಳೆಯ ಪತಿ ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>ಶೃಂಗಾರ ಗೌರಿ-ಜ್ಞಾನವಾಪಿ ಪ್ರಕರಣದ ವಿಚಾರಣೆಯು ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರದಿಂದ ಪುನರಾರಂಭವಾಗಲಿದ್ದು, ಅದೇ ಹೊತ್ತಲ್ಲೇ ಬೆದರಿಕೆ ಕರೆಯೂ ಬಂದಿದೆ.</p>.<p>‘ಸೋಹನ್ ಲಾಲ್ ಆರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ’ ಎಂದು ವಾರಾಣಸಿಯ ಲುಕ್ಸಾ ಠಾಣೆಯ ಠಾಣಾಧಿಕಾರಿ ಅನಿಲ್ ಸಾಹು ಹೇಳಿದ್ದಾರೆ.</p>.<p>ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಯ, ‘ಪಾಕಿಸ್ತಾನದ ಮೊಬೈಲ್ ಸಂಖ್ಯೆಯಿಂದ ಯಾರೋ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ರಾಜಸ್ತಾನದ ಉದಯಪುರದ ಕನ್ಹಯ್ಯಾ ಅವರಂತೆ ಕತ್ತು ಕುಯ್ದು ಕೊಲೆ ಮಾಡುವುದಾಗಿ ಕರೆ ಮಾಡಿದವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಪ್ರಕರಣವನ್ನು ಹಿಂಪಡೆಯಲು ನಮಗೆ ಒತ್ತಡ ಹೇರುತ್ತಿದ್ದಾರೆ. ಇಲ್ಲವಾದರೆ, ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ’ ಎಂದು ಅವರು ಹೇಳಿದರು.</p>.<p>ಮಾರ್ಚ್ 19 ರಂದು ಮತ್ತು ಜುಲೈ 20 ರಂದು ಪಾಕಿಸ್ತಾನದ ಸಂಖ್ಯೆಯಿಂದ ತಮಗೆ ಕರೆಗಳು ಬಂದಿರುವುದಾಗಿ ಆರ್ಯ ಹೇಳಿದ್ದಾರೆ.</p>.<p>‘ಇದಲ್ಲದೆ, ಆಗಸ್ಟ್ 3ರಂದೂ ಪಾಕಿಸ್ತಾನದ ನಂಬರ್ನಿಂದ ಮಿಸ್ಡ್ ಕಾಲ್ ಬಂದಿತ್ತು. ಬೆದರಿಕೆ ಕರೆಗಳು ಹೆಚ್ಚುತ್ತಿರುವುದರಿಂದ ವಿಷಯವನ್ನು ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p>.<p>ಸೋಹನ್ ಲಾಲ್ ಆರ್ಯ ಅವರು ಲಕ್ಷ್ಮಿ ದೇವಿ ಎಂಬುವವರ ಪತಿ. 693/2021 ರಾಖಿ ಸಿಂಗ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಪ್ರಕರಣದ ಐವರು ವಾದಿಗಳಲ್ಲಿ ಲಕ್ಷ್ಮೀ ದೇವಿ ಅವರೂ ಒಬ್ಬರು. ಜ್ಞಾನವಾಪಿ ಆವರಣದೊಳಗೆ ಶೃಂಗಾರ ಗೌರಿ ಮತ್ತು ಇತರ ದೇವತೆಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಐವರೂ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಪ್ರಕರಣದ ವಿಚಾರಣೆ ಇಂದೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>