<p><strong>ನವದೆಹಲಿ:</strong> ವಾರಾಣಸಿಯ ಜ್ಞಾನವಾಪಿ–ಶೃಂಗಾರ ಗೌರಿ ಸಂಕೀರ್ಣದ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ ಇರುವ ಪ್ರದೇಶವನ್ನು ಮುಂದಿನ ಆದೇಶದ ವರೆಗೆ ಸಂರಕ್ಷಣೆ ಮಾಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p>ಅಲ್ಲದೇ, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಕ್ರೋಡಿಕರಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲು ಹಿಂದೂ ಕಕ್ಷಿದಾರರಿಗೆ ಅನುಮತಿ ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಸರ್ವೆ ಆಯುಕ್ತರ ನೇಮಕ ಮಾಡಿ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ ಮೂರು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಹಿಂದೂ ಕಕ್ಷಿದಾರರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.</p>.<p>ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗ ಇರುವ ಪ್ರದೇಶವನ್ನು ಸಂರಕ್ಷಣೆಗೆ ಸಂಬಂಧಿಸಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚನೆ ನೀಡಿ ಸುಪ್ರೀಂಕೋರ್ಟ್ ಮೇ 17ರಂದು ಮಧ್ಯಂತರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಾರಾಣಸಿಯ ಜ್ಞಾನವಾಪಿ–ಶೃಂಗಾರ ಗೌರಿ ಸಂಕೀರ್ಣದ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ ಇರುವ ಪ್ರದೇಶವನ್ನು ಮುಂದಿನ ಆದೇಶದ ವರೆಗೆ ಸಂರಕ್ಷಣೆ ಮಾಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p>ಅಲ್ಲದೇ, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಕ್ರೋಡಿಕರಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲು ಹಿಂದೂ ಕಕ್ಷಿದಾರರಿಗೆ ಅನುಮತಿ ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಸರ್ವೆ ಆಯುಕ್ತರ ನೇಮಕ ಮಾಡಿ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ ಮೂರು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಹಿಂದೂ ಕಕ್ಷಿದಾರರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.</p>.<p>ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗ ಇರುವ ಪ್ರದೇಶವನ್ನು ಸಂರಕ್ಷಣೆಗೆ ಸಂಬಂಧಿಸಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚನೆ ನೀಡಿ ಸುಪ್ರೀಂಕೋರ್ಟ್ ಮೇ 17ರಂದು ಮಧ್ಯಂತರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>