ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನವಾಪಿ ಮಸೀದಿ ಪ್ರಕರಣ ಮುಂದಿನ ವಿಚಾರಣೆ ಜುಲೈ 12ಕ್ಕೆ

Last Updated 4 ಜುಲೈ 2022, 15:25 IST
ಅಕ್ಷರ ಗಾತ್ರ

ವಾರಾಣಸಿ: ಜ್ಞಾನವಾಪಿ ಮಸೀದಿ– ಶೃಂಗಾರ ಗೌರಿ ಸಂಕೀರ್ಣದ ನಿರ್ವಹಣೆಗೆ ಸಂಬಂಧಿಸಿದ ಪ್ರಕರಣದ ಮುಂದಿನ ವಿಚಾರಣೆಯನ್ನು ಇಲ್ಲಿನ ಜಿಲ್ಲಾ ನ್ಯಾಯಾಲಯವು ಜುಲೈ 12ಕ್ಕೆ ನಿಗದಿಪಡಿಸಿದೆ.

ಸೋಮವಾರ ಮುಸ್ಲಿಂ ಅರ್ಜಿದಾರರ ಪರ ವಕೀಲ ಮೊಹಮ್ಮದ್ ತೊಹಿದ್ ಖಾನ್ ಅವರು ವಾದ ಮಂಡಿಸಿದರು.

‘ಪ್ರಕರಣದ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದೆಯೇ ಇಲ್ಲವೇ ಎಂಬ ಬಗ್ಗೆ ಮುಸ್ಲಿಂ ಪರ ಅರ್ಜಿದಾರರು ಎಲ್ಲ ಅಂಶಗಳನ್ನು ಮಂಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಾದ ಮಂಡಿಸಲು ಅವರು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ಮುಂದಿನ ವಿಚಾರಣೆಗಾಗಿ ಜುಲೈ 12ಕ್ಕೆ ದಿನಾಂಕ ನಿಗದಿಪಡಿಸಿತು’ ಎಂದು ಹಿಂದೂಗಳ ಪರ ವಾದ ಮಂಡಿಸಿದ ಮದನ್ ಮೋಹನ್ ಯಾದವ್ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT