‘ದೇವಸ್ಥಾನವು ಸ್ವೀಕರಿಸಿದ ಬೆಲ್ಲದ ಪ್ಯಾಕೇಜ್ ಮೇಲೆ ‘ಹಲಾಲ್’ ಎಂದು ನಮೂದಿಸಲಾಗಿದೆ. ಇದನ್ನು ಪೂರೈಸುವ ಕಂಪನಿಯು ಅರಬ್ ದೇಶಗಳಿಗೂ ಈ ಬೆಲ್ಲವನ್ನು ರಫ್ತು ಮಾಡುತ್ತದೆ. ಈ ಹಿಂದೆ ಖರೀದಿಸಿದ್ದ ಬೆಲ್ಲಕ್ಕೆ ಹುಳುಬಿದ್ದಿದ್ದು, ಪ್ರಸಾದಕ್ಕೆ ಬಳಸಲು ಯೋಗ್ಯವಲ್ಲದ ಕಾರಣ ಹೊಸ ಬೆಲ್ಲವನ್ನು ಖರೀದಿಸಲಾಗಿದೆ’ ಎಂದು ಶಬರಿಮಲೆ ಅಯ್ಯಪ್ಪ ದೇವಸ್ಥಾನವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿಯು ನ್ಯಾಯಾಲಯಕ್ಕೆ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರದ ವರದಿ ಬಂದ ನಂತರ ಬುಧವಾರ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ತಿಳಿಸಿದೆ.