ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ಸಿಎಂ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವ ಸವಾಲು: ಪೊಲೀಸ್ ಕಟ್ಟೆಚ್ಚರ

Last Updated 23 ಏಪ್ರಿಲ್ 2022, 7:40 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಸಂಸದೆ ನವನೀತ್ ಕೌರ್ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಸವಾಲು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಮುಖ್ಯಮಂತ್ರಿಯವರ ಬಂಗಲೆ ಮತ್ತು ರಾಣಾ ದಂಪತಿಯ ಖಾರ್ ಪ್ರದೇಶದ ಫ್ಲಾಟ್‌ಗೆ ಭದ್ರತೆ ಹೆಚ್ಚಿಸಲಾಗಿದೆ.

ಮಹಾರಾಷ್ಟ್ರಕ್ಕೆ ಸಾಡೇಸಾತಿಯಿಂದ ವಿಮೋಚನೆ ಕೊಡಿಸಲು ಮುಖ್ಯಮಂತ್ರಿಗಳ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಬದ್ನೇರಾ ಕ್ಷೇತ್ರದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಸವಾಲು ಹಾಕಿದ್ದರು.

ಹೀಗಾಗಿ, ರಾತ್ರಿಯಿಂದಲೂ ನೂರಾರು ಶಿವಸೇನೆ ಕಾರ್ಯಕರ್ತರು ಮಾತೋಶ್ರೀಯ ಹೊರಗೆ ಜಮಾಯಿಸಿದ್ದರು. ರಾಣಾ ದಂಪತಿಯ ಫ್ಲಾಟ್‌ನ ಹೊರಗೂ ಒಂದು ಗುಂಪು ಮೊಕ್ಕಾಂ ಹೂಡಿದೆ. ತಮ್ಮ ಮನೆಯಿಂದ ಹರಡುವಂತೆ ರಾಣಾ ದಂಪತಿಗೆ ಸೂಚಿಸಿರುವ ಶಿವಸೇನೆ ಕಾರ್ಯಕರ್ತರು ಇಲ್ಲವಾದರೆ 'ಅಭಿಷೇಕ' ದೊಂದಿಗೆ ಸ್ವಾಗತ ಮತ್ತು 'ಮಹಾ ಪ್ರಸಾದ' ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಖುದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಖೇರ್ವಾಡಿ ಪೊಲೀಸ್ ಠಾಣೆಯು ಐಪಿಸಿ ಸೆಕ್ಷನ್ 149 ರ ಅಡಿಯಲ್ಲಿ ರಾಣಾ ದಂಪತಿಗೆ ನೋಟಿಸ್ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT