ಈ ಕುರಿತು ಬುಧವಾರ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ ದಂಪತಿ, ‘ನ್ಯಾಯಾಲಯದ ಯಾವುದೇ ಷರತ್ತು ಉಲ್ಲಂಘಿಸಿಲ್ಲ. ಜಾಮೀನು ರದ್ದು ಕೋರಿರುವ ಪೊಲೀಸರು ಸಮರ್ಪಕ ಕಾರಣ ನೀಡುವಲ್ಲಿ ವಿಫಲರಾಗಿದ್ದಾರೆ’ ಎಂದು ಜಂಟಿ ಹೇಳಿಕೆ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ‘ಮುಂದಿನ ವಿಚಾರಣೆವರೆಗೂ ದಂಪತಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬಳಿಕ ನ್ಯಾಯಾಲಯವು ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.